Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

05:19 PM Oct 05, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ ಸಚಿವರು, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರ್ಕಾರ, ವಿಧಾನ ಸೌಧ, ಬೆಂಗಳೂರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಇಲ್ಯಾಸ್ ಉಲ್ಲಾ ಷರೀಪ್ ರವರು ತಮ್ಮ ಬ್ಯಾಂಕಿನ 2023-24ನೇ ಸಾಲಿನ ಲಾಭದಲ್ಲಿ 2% ಸಹಕಾರ ಶಿಕ್ಷಣ ನಿಧಿ ರೂ.17,75,905-63 ಗಳನ್ನು ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್ ನಿ., ಚಿತ್ರದುರ್ಗ ಇದರ ಜಿಲ್ಲಾ ಸಹಕಾರ ಶಿಕ್ಷಕರಾದ ಶ್ರೀ ನಾಗರಾಜ ಪಾಟೀಲ್ ರವರಿಗೆ ನೀಡಿದರು.

Advertisement

 

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಹೆಚ್.ಬಿ.ಮಂಜುನಾಥ್, ಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಶ್ರೀ ಹೆಚ್.ಎಂ.ದ್ಯಾಮಣ್ಣ ಕೋಗುಂಡೆ, ಶ್ರೀ ಎಸ್.ಆರ್.ಗಿರೀಶ್, ಶ್ರೀ ಹೆಚ್.ಟಿ.ನಾಗರೆಡ್ಡಿ, ಶ್ರೀ ಟಿ.ಮಹಾಂತೇಶ್, ಶ್ರೀ ಕೆ.ಜಗ್ಗಣ್ಣ, ಶ್ರೀ ಓ.ಮಂಜುನಾಥ್ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ದಿಲೀಪ್ ಕುಮಾರ್ ಆರ್. ಎಸ್. ಹಾಜರಿದ್ದರು.

Advertisement

Advertisement
Tags :
17 lakhs donation17 ಲಕ್ಷbengaluruchitradurgaChitradurga DCC Bankeducation fundsuddionesuddione newsಚಿತ್ರದುರ್ಗಚಿತ್ರದುರ್ಗ ಡಿಸಿಸಿ ಬ್ಯಾಂಕ್ಬೆಂಗಳೂರುಶಿಕ್ಷಣ ನಿಧಿಗೆ ದೇಣಿಗೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article