Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ನಗರದ ಪಾಳುಬಿದ್ದ ಮನೆಯೊಂದರಲ್ಲಿ 3 ಅಸ್ಥಿಪಂಜರ ಪತ್ತೆ

10:43 PM Dec 28, 2023 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.28 : ಪಾಳುಬಿದ್ದ ಮನೆಯೊಂದರಲ್ಲಿ ಮೂವರು ವ್ಯಕ್ತಿಗಳ ಮೃತದೇಹದ ಅಸ್ಥಿಪಂಜರ ಪತ್ತೆಯಾದ ಆತಂಕಕಾರಿ ಘಟನೆ ನಗರದ ಚಳ್ಳಕೆರೆ ಗೇಟ್ ಬಳಿ ಇರುವ ಜೈಲ್ ರಸ್ತೆಯಲ್ಲಿ ನಡೆದಿದೆ.

Advertisement

ಜೈಲ್ ರಸ್ತೆಯಲ್ಲಿರುವ ಜಗನ್ನಾಥ ರೆಡ್ಡಿ, ಇಂಜಿನಿಯರ್, ದೊಡ್ಡ ಸಿದ್ದವ್ವನಹಳ್ಳಿ ಎಂಬ ಹೆಸರರಿರುವ ಮನೆಯಲ್ಲಿ ಮೂರು  ಅಸ್ಥಿಪಂಜರಗಳು ಕಂಡುಬಂದಿವೆ.

ದುರ್ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಬಡಾವಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಮನೆಯಲ್ಲಿ ಕಳೆದ ನವೆಂಬರ್ 2022 ರಿಂದ ಯಾರೂ ಇರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Advertisement

ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್,  ಸಿಪಿಐ ನಹಿಂ ಅಹಮದ್, ಪಿಎಸ್ಐ ರಘು ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಘಟನೆ ಕುರಿತು ಸ್ಥಳೀಯರ ಶಂಕೆ : 2019ರಲ್ಲಿ  ದೊಡ್ಡ ಸಿದ್ದವ್ವನಹಳ್ಳಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರ ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಹಣ ಮಾಡಿದರೂ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಇದರಿಂದ ತೀವ್ರ ಮನನೊಂದು ಅವರು ಯಾರ ಸಂಪರ್ಕಕ್ಕೂ ಸಿಗದೆ ಮನೆಯಲ್ಲಿಯೇ ಅವರು ಇರುತ್ತಿದ್ದರು. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಕಿಟಕಿಯಲ್ಲಿ ಮಾತಾಡಿಸಿ ಕಳುಹಿಸಿತಿದ್ದರು ಎನ್ನಲಾಗಿದೆ. ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು,  ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿವೆ. ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ ಅಸ್ಥಿಪಂಜರಗಳು ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

 

Advertisement
Tags :
chitradurgaChitradurga citydilapidated housegoogleskeletonssuddioneಅಸ್ಥಿಪಂಜರಗೂಗಲ್ಚಿತ್ರದುರ್ಗಚಿತ್ರದುರ್ಗ ನಗರಪತ್ತೆಪಾಳುಬಿದ್ದ ಮನೆಸುದ್ದಿಒನ್
Advertisement
Next Article