Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರಿನಲ್ಲಿ ಕುರಿ ಶೆಡ್ ಗೆ ಆಕಸ್ಮಿಕ ಬೆಂಕಿ : 30 ಕ್ಕೂ ಹೆಚ್ಚು ಕುರಿಗಳು ಸಾವು

08:45 PM Mar 30, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಮಾರ್ಚ್. 30 : ಆಕಸ್ಮಿಕವಾಗಿ ಕೊಟ್ಟಿಗೆಗೆ ಬೆಂಕಿ ಬಿದ್ದು 15 ಕುರಿಗಳು, 01 ಮೇಕೆ ಹಾಗೂ 20 ಕುರಿಮರಿಗಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಣಿಹಟ್ಟಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.‌

Advertisement

ಓಣಿಹಟ್ಟಿ ಗ್ರಾಮದ ಚಿತ್ತಪ್ಪ, ಶಿವಣ್ಣ, ಚಿತ್ತಯ್ಯ ಅವರಿಗೆ ಸೇರಿದ ಕುರಿಗಳು ಎಂದು ತಿಳಿದು ಬಂದಿದೆ. ಶನಿವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಎರಡು ಕುರಿ ಶೆಡ್‌ಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬೆಂಕಿಯ ಕೆನ್ನಾಲಿಗೆಗೆ ಕುರಿಗಳ ಜೊತೆಗೆ ಶೆಡ್‌ನ ಮೇಲ್ಛಾವಣಿ ಮತ್ತು 10 ತೆಂಗಿನ ಮರಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ  ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲೇ ಕುರಿಗಳು‌ ಸುಟ್ಟು ಹೋಗಿದ್ದವು.

Advertisement

ಸ್ಥಳಕ್ಕೆ ತಹಸೀಲ್ದಾರ್ ಸಿ.ರಾಜೇಶ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿ, ವಿದ್ಯುತ್ ಶಾಟ್ ಸರ್ಕ್ಯೂಟ್‌ನಿಂದ ಈ‌  ಘಟನೆ ನಡೆದಿದೆ. ಸರಕಾರದಿಂದ  ಅವರಿಗೆ ಸೂಕ್ತ ಪರಿಹಾರ ಕೊಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ  ಪಶುವೈದ್ಯ ಡಾ.ಹುಸೇನ್, ಡೆಪ್ಯಟಿ ತಹಸೀಲ್ದಾರ್ ಜಗನ್ನಾಥ್, ವಿ.ಎ. ಮಂಜುನಾಥ್ ಇದ್ದರು.

Advertisement
Tags :
Accidental firebengaluruchitradurgadiedhiriyursheepsheep shedsuddionesuddione newsಆಕಸ್ಮಿಕ ಬೆಂಕಿಕುರಿ ಶೆಡ್ಕುರಿಗಳುಚಿತ್ರದುರ್ಗಬೆಂಗಳೂರುಸಾವುಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article