For the best experience, open
https://m.suddione.com
on your mobile browser.
Advertisement

ವಿಮಾನ ದುರಂತದಿಂದ ಪ್ರಾಣಪಾಯಾದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ : ಘಟನೆ ಬಗ್ಗೆ ಹೇಳಿದ್ದೇನು..?

04:57 PM Feb 18, 2024 IST | suddionenews
ವಿಮಾನ ದುರಂತದಿಂದ ಪ್ರಾಣಪಾಯಾದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ   ಘಟನೆ ಬಗ್ಗೆ ಹೇಳಿದ್ದೇನು
Advertisement

Advertisement
Advertisement

Advertisement

ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಯಾವಾಗಲೂ ಜರ್ನಿ ಮಾಡುತ್ತಾ ಇರುತ್ತಾರೆ. ಇಂದು ಶೂಟಿಂಗ್ ಮುಗಿಸಿ, ಮುಂಬೈಯಿಂದ ಹೈದ್ರಾಬಾದ್ ಗೆ ಹೊರಟಿದ್ದರು. ಈ ವೇಳೆ ರಶ್ಮಿಕಾ ಮಂದಣ್ಣ ಪ್ರಯಾಣ ಮಾಡುತ್ತಿದ್ದ ವಿಮಾನ, ನಿಲ್ದಾಣದಲ್ಲೇ ಭೂಸ್ಪರ್ಶವಾಗಿದೆ. ಆದರೆ ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. ರಶ್ಮಿಕಾ ಮಂದಣ್ಣ ಕೂಡ ಪ್ರಾಣಪಾಯದಿಂದ ಪಾರಾಗಿದ್ದಾರೆ. ಇದೇ ವಿಮಾನ ನಿಲ್ದಾಣದಲ್ಲಿ ನಟಿ ಶ್ರದ್ದಾ ದಾಸ್ ಕೂಡ ಪ್ರಯಾಣ ಮಾಡುತ್ತಿದ್ದರು. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

Advertisement
Advertisement

ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ಇಂದು ಪ್ರಾಣಪಾಯದಿಂದ ಇಬ್ಬರು ಪಾರಾಗಿದ್ದೇವೆ ಎಂದು ಸ್ಟೋರಿಯಲ್ಲಿ ಹಾಕಿದ್ದಾರೆ. ರಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್‌ ಪಾರ್ಟಿ ಸಿನಿಮಾದಿಂದ ತಮ್ಮ ವೃತ್ತಿಜೀವನ ಆರಂಭಿಸಿದ್ದು, ಸದ್ಯ ಇದೀಗ ಬಹುಭಾಷೆಗಳಲ್ಲೂ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆರೆಕಂಡ 'ಅನಿಮಲ್' ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಇದು ಜನಪ್ರಿಯತೆ ಹೆಚ್ಚಿಸಿದೆ. ಇನ್ನು ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2ನಲ್ಲಿ ಕಾರ್ಯನಿರತರಾಗಿದ್ದಾರೆ.

ರಶ್ಮಿಕಾ ಮಂದಣ್ಣ ಅವರಿಗೆ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. ಕನ್ನಡದಿಂದ ಹೋದ ನಟಿ ಈಗಂತೂ ಬಾಲಿವುಡ್ ತನಕವೂ ಡಿಮ್ಯಾಂಡ್ ಇದೆ‌ ಸದ್ಯ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ ರಶ್ಮಿಕಾ ಮಂದಣ್ಣ.

Advertisement
Tags :
Advertisement