Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ನೇಮಕ

07:08 PM Feb 22, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ : ಫೆ (22) : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಯುವ ನಾಯಕಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ.

ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದ ತೇಜಸ್ವಿ ಸೂರ್ಯ ಮತ್ತು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಶಾಸಕ ಧೀರಜ್ ಮುನಿರಾಜ್ ರವರು ಇಂದು ಬೆಂಗಳೂರಿನಲ್ಲಿ ಅಧಿಕೃತ ನೇಮಕ ಪತ್ರವನ್ನು ನೀಡಿದರು.

Advertisement

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ, ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು. ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕಾರ್ಯ ನಿರ್ವಹಿಸಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂ ಸಹ   ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.

Advertisement
Tags :
appointedbengaluruBhargavi DravidchitradurgaState Secretarysuddionesuddione newsyuva morchaಎನ್.ಬಿ.ಭಾರ್ಗವಿ ದ್ರಾವಿಡ್ಚಿತ್ರದುರ್ಗನೇಮಕಬೆಂಗಳೂರುಯುವ ಮೋರ್ಚಾರಾಜ್ಯ ಕಾರ್ಯದರ್ಶಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article