Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬೈಕ್ - ಕಾರು ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು..!

07:07 PM Jul 14, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಹಾಗೂ ಯೋಗೀಶ್ ಮೃತರು.

ಶನಿವಾರ ತಡರಾತ್ರಿ ಈ ಅಪಘಾತ ನಡೆದಿದೆ. ಮೃತರಿಬ್ಬರು ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. 26 ವರ್ಷದ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದವರು ಹಾಗೂ 27 ವರ್ಷದ ಯೋಗೀಶ್ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದವರು. ಇಬ್ಬರ ಸಾವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.

Advertisement

ಕಾರು ಗುದ್ದಿರುವ ರಭಸಕ್ಕೆ ಇಬ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಚಿಕ್ಕ ವಯಸ್ಸಿಗೆ ಎಲ್ಲರನ್ನು ಬಿಟ್ಟು ಬಾರದೂರಿಗೆ ಹೋಗಿರುವ ಸಂಕಟವನ್ನು ಅಪ್ಪ ಅಮ್ಮನಿಂದ ತಡೆದುಕೊಳ್ಳಲಾಗುತ್ತಿಲ್ಲ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
bengalurubikecarchitradurgacollisionRidersuddionesuddione newsಕಾರುಚಿತ್ರದುರ್ಗಡಿಕ್ಕಿಬೆಂಗಳೂರುಬೈಕ್ಸವಾರಸಾವುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article