Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ : ಪಕ್ಷಕ್ಕೆ ಹೆಚ್ಚಿನ ಸದಸ್ಯರನ್ನು ಸೇರಿಸಿ : ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ

04:22 PM Oct 27, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 27 : ಭಾರತೀಯ ಜನತಾ ಪಾರ್ಟಿ ದೇಶದಲ್ಲಿ 11 ಕೋಟಿ, ಕರ್ನಾಟಕ ರಾಜ್ಯದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಿದೆ ಸದಸ್ಯತ್ವ ಮಾಡಲು ಇನ್ನು ಮೂರು ಇದೆ ಕಾಲವಾಕಾಶ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವಂತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ನಡೆದ ಸಕ್ರಿಯ ಸದಸ್ಯರ ಅಭಿಯಾನದಲ್ಲಿ ಅರ್ಜಿಯನ್ನು ತುಂಬುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಚಿತ್ರದುರ್ಗ ನಗರದ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‍ನಲ್ಲಿಯೂ ಮೂರು ಜನ ಸಕ್ರಿಯ ಕಾರ್ಯಕರ್ತರು ಇರಬೇಕಿದೆ ಯಾವ ಕಾರ್ಯಕರ್ತ ತನ್ನ ಬೂತ್ ನಲ್ಲಿ 50 ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡುತ್ತಾರೋ ಅಂತಹರು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗುತ್ತಾರೆ. ಇವರು ಮುಂದಿನ ದಿನದಲ್ಲಿ ಪಕ್ಷದ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಲು ಇದು ಸಹಾಯವಾಗುತ್ತದೆ ಎಂದರು.

ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದಾಗಬೇಕಿದೆ ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರರು ಈ ದಿನದಲ್ಲಿ ಹೆಚ್ಚಿನ ಶ್ರಮವನ್ನು ಹಾಕುವುದರ ಮೂಲಕ ಸದಸ್ಯರನ್ನು ಮಾಡಬೇಕಿದೆ, ಇದು ಮುಂದಿನ ದಿನದಲ್ಲಿ ಬರುವ ಜಿಲ್ಲಾ.ತಾಲ್ಲೂಕು ಪಂಚಾಯಿತಿಗಳಿಗೆ ಅನುಕೂಲವಾಗಲಿದೆ. ಈ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದ್ದು ಇದಕ್ಕೆ ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಎಂದು ತಿಪ್ಪಾರೆಡ್ಡಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೇ, ಯುವ ಮೋರ್ಚಾದ ಅಧ್ಯಕ್ಷ ರಾಮು, ಹೆಚ್.ಎನ್. ಲೋಕೇಶ್ ಕುಮಾರ್, ಬಸಮ್ಮ, ಶಾಂತಮ್ಮ, ಕಿರಣ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
bengaluruBJP membership campaignchitradurgaFormer MLA G.H.Thippareddysuddionesuddione newsಚಿತ್ರದುರ್ಗಬಿಜೆಪಿ ಸದಸ್ಯತ್ವ ಅಭಿಯಾನಬೆಂಗಳೂರುಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article