For the best experience, open
https://m.suddione.com
on your mobile browser.
Advertisement

ಶಾಸಕ ಮುನಿರತ್ನ ವಿರುದ್ದ ಜಾತಿ ನಿಂದನೆ ಕೇಸು ದಾಖಲಿಸಿ ಬಂಧಿಸಿ : ಚಿತ್ರದುರ್ಗದಲ್ಲಿ ಛಲವಾದಿ ಜನಾಂಗದಿಂದ ಪ್ರತಿಭಟನೆ

06:26 PM Sep 14, 2024 IST | suddionenews
ಶಾಸಕ ಮುನಿರತ್ನ ವಿರುದ್ದ ಜಾತಿ ನಿಂದನೆ ಕೇಸು ದಾಖಲಿಸಿ ಬಂಧಿಸಿ   ಚಿತ್ರದುರ್ಗದಲ್ಲಿ ಛಲವಾದಿ ಜನಾಂಗದಿಂದ ಪ್ರತಿಭಟನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ಆರ್.ಆರ್.ನಗರ ಶಾಸಕ ಮುನಿರತ್ನ ಬಿ.ಬಿ.ಎಂ.ಪಿ.ಗುತ್ತಿಗೆದಾರ ಚಲುವರಾಜರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ವಿರೋಧಿಸಿ ಛಲವಾದಿ ಜನಾಂಗದವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

ಲಂಚದ ವಿಚಾರವಾಗಿ ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಸೊಂಟದ ಕೆಳಗಿನ ಮಾತುಗಳನ್ನಾಡಿರುವ ಶಾಸಕ ಮುನಿರತ್ನರನ್ನು ಕೂಡಲೆ ಬಂಧಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆಂದು ಎಚ್ಚರಿಸಿದ ಪ್ರತಿಭಟನಾಕಾರರು ಶಾಸಕನ ಮೇಲೆ ಜಾತಿ ನಿಂದನೆ ಕೇಸು ದಾಖಲಿಸುವಂತೆ ಆಗ್ರಹಿಸಿದರು.

Advertisement

ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ, ಛಲವಾದಿ ಜನಾಂಗದ ಮುಖಂಡರುಗಳಾದ ಹೆಚ್.ಸಿ.ನಿರಂಜನಮೂರ್ತಿ, ಎಸ್.ಎನ್.ರವಿಕುಮಾರ್, ದಯಾನಂದ್, ನ್ಯಾಯವಾದಿ ಅಣ್ಣಪ್ಪಸ್ವಾಮಿ, ಓಂಕಾರಮೂರ್ತಿ, ಚಂದ್ರಣ್ಣ, ಜಗ್ಗಣ್ಣ, ತಿಪ್ಪೇಸ್ವಾಮಿ, ಚಿದಾನಂದಮೂರ್ತಿ, ವಕೀಲ ಶಶಾಂಕ, ಪ್ರಸಾದ್, ನಾಗರಾಜ್, ಸುಹಾಸ್ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Tags :
Advertisement