Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ನಿವಾರಣೆಯತ್ತ ಗಮನ ಹರಿಸಲಿ : ಗಣೇಶ್

05:52 PM Aug 14, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಆಗಸ್ಟ್.14 : ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳಾಗಿದ್ದರೂ ಅಸ್ಪೃಶ್ಯತೆ ಬಡತನ ಇನ್ನು ನಿವಾರಣೆಯಾಗಿಲ್ಲ. ಸಾಕಷ್ಟು ಬಡ ಕುಟುಂಬಗಳು ಇನ್ನು ಬಿ.ಪಿ.ಎಲ್.ಪಟ್ಟಿಯಲ್ಲಿಯೇ ಇವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ನಿವಾರಣೆಯತ್ತ ಗಮನ ಹರಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಒತ್ತಾಯಿಸಿದರು.

Advertisement

ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಏಕಾಂಗಿ ಧರಣಿ ನಡೆಸಿದ ಅವರು ಸ್ವಂತ ಮನೆ ಜಮೀನು ಇಲ್ಲದವರು ನೆಮ್ಮದಿಯಿಂದ ಬದುಕಬೇಕಾಗಿರುವುದರಿಂದ ಆಳುವ ಸರ್ಕಾರಗಳು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಸಲ್ಲಿಸಿದರು.

Advertisement
Tags :
bengalurucentral and state governmentschitradurgafocusGaneshpovertysuddionesuddione newsಕೇಂದ್ರ ಮತ್ತು ರಾಜ್ಯ ಸರ್ಕಾರಗಳುಗಣೇಶ್ಚಿತ್ರದುರ್ಗಬಡತನಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article