Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

01:38 PM Apr 26, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55) ಮೃತಪಟ್ಟಿದ್ದಾರೆ.

Advertisement

ತಾಲ್ಲೂಕಿನ ಹೊಟ್ಲೆಪನಹಳ್ಳಿ  202 ಮತ ಕೇಂದ್ರದಲ್ಲಿ ಕರ್ತವ್ಯ ನಿರತರಾಗಿದ್ದಾಗ ಕುಸಿದು ಬಿದ್ದಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ.

ಚಳ್ಳಕೆರೆ ನಗರದ ವಿಠಲನಗರದಲ್ಲಿ ವಾಸಮಾಡುತ್ತಿದ್ದು ಇಂದು ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದರು.

ಆಸ್ಪತ್ರೆಗೆ  ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹಾಗೂ ಚುನಾವಣಾಧಿಕಾರಿಗಳು ಭೇಟಿ ನೀಡಿ ಮೃತ ಯಶೋದಮ್ಮ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಾದ ಕುಮಾರಸ್ವಾಮಿ,ಎಎಸ್ಪಿ ಎಸ್ ಜೆ ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿ ಆನಂದ ಡಿವೈಎಸ್ ಪಿ ಟಿ.ಬಿ.ರಾಜಣ್ಣ,ಸೇರಿದಂತೆ ಅಧಿಕಾರಿಗಳು ಇದ್ದರು.

Advertisement
Tags :
APRObengaluruchallakerechitradurgaelection dutysuddionesuddione newsteacher diesಎಪಿಆರ್ ಓಚಳ್ಳಕೆರೆಚಿತ್ರದುರ್ಗಚುನಾವಣಾ ಕರ್ತವ್ಯಬೆಂಗಳೂರುಶಿಕ್ಷಕಿ ಸಾವುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article