Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಳ್ಳಕೆರೆ ದರೋಡೆ ಪ್ರಕರಣ : ಇಬ್ಬರ ಬಂಧನ

08:39 PM Oct 09, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ,ಅಕ್ಟೋಬರ್. 09 : ತಾಲೂಕಿನ ಹಿರೇಹಳ್ಳಿ ಗ್ರಾಮದ ಸಮೀಪ ಹೊರವಲಯದಲ್ಲಿದ್ದ ಒಂಟಿ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು ಮನೆಯ ಯಜಮಾನಿಗೆ ಚಾಕು ತೋರಿಸಿ ಎದುರಿಸಿ ಹಗ್ಗದ ಸಹಾಯದಿಂದ ಕೈಗಳನ್ನು ಕಟ್ಟಿ ಮನೆಯಲ್ಲಿದ್ದ ರೂ. 6,52,500 ನಗದು ಮತ್ತು ಹೆಣ್ಣು ಮಗಳ ಮೈ ಮೇಲಿನ ಆಭರಣಗಳನ್ನ ದೋಚಿಕೊಂಡು ಪರಾರಿಯಾಗಿದ್ದರು.

Advertisement

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಚಿತ್ರದುರ್ಗ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ ಅಧ್ಯಕ್ಷರಾದ ಕುಮಾರಸ್ವಾಮಿ ಚಳ್ಳಕೆರೆ ಡಿ ವೈ ಎಸ್ ಪಿ ಟಿ ಬಿ ರಾಜಣ್ಣ ಇವರ ನೇತೃತ್ವದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಲೋಕೇಶ್ ಹಾಗೂ ಶಿವಕುಮಾರ್ ಪೋಲಿ ಸ್.ಸಿಬ್ಬಂದಿಗಳು ಸಿಬ್ಬಂದಿಗಳು ಒಂಟಿ ಮನೆ ದರೋಡೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ದರೋಡೆಕೋರರಾದ ಆಂಧ್ರ ಪ್ರದೇಶ ಅನಂತಪುರ ಜಿಲ್ಲೆಯ ರುದ್ರಂಪೇಟೆ ಎನ್ ಜಿ ಓ ಕಾಲೋನಿಯ ನೀಲಂ ಶ್ರೀರಾಮ್ ವಿಜಯ್, ವಿಜಯವಾಡದ ರಂಗುಲ ಪ್ರಸಾದ್. ಇಬ್ಬರನ್ನ ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು ದರೋಡೆಯಲ್ಲಿ ಮುಖಂಡತ್ವ ವಹಿಸಿದ ಪಾಲ ವೆಂಕಟೇಶ್ ರಾವ್ ತಲೆ ತಪ್ಪಿಸಿಕೊಂಡಿದ್ದಾನೆ.

ಇಬ್ಬರನ್ನ ವಶಕ ಪಡೆದ ಪೊಲೀಸರು ಅವರಿಂದ ರಾಬರಿ ಮಾಡುವಾಗ ಬಳಸಿದ್ದ ಸಿಸಿ ಕ್ಯಾಮೆರಾ, ಮುಖದ ಕ್ಯಾಪ್, ಚಾಕುಗಳು, ಟಾರ್ಚ್ಗಳು, ಕಟರ್ ‌ಮೊಲ ಹಿಡಿಯುವ ಬಲೆ ,ಪ್ಲಾಸ್ಟಿಕ್ ಹಾಗೂ ಮೊಬೈಲ್ ಇವುಗಳನ್ನ ವಶಕ ಪಡೆದಿದ್ದು ನ್ಯಾಯಾಲಯದ ಮುಂದೆ ಈ ಇಬ್ಬರನ್ನ ಹಾಜರಿ ಪಡಿಸಲಾಗಿದೆ.

ಮೂರು ತಿಂಗಳ ಹಿಂದೆ ನಡೆದ ಒಂಟಿ ಮನೆ ದರೋಡೆಯನ್ನ ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದ ತಂಡವನ್ನು ಜಿಲ್ಲಾ ಎಸ್ ಪಿ ಅಭಿನಂದಿಸಿದ್ದಾರೆ.

Advertisement
Tags :
arrestedbengaluruchallakerechitradurgarobbery casesuddionesuddione newsಇಬ್ಬರ ಬಂಧನಚಳ್ಳಕೆರೆಚಿತ್ರದುರ್ಗದರೋಡೆ ಪ್ರಕರಣಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article