For the best experience, open
https://m.suddione.com
on your mobile browser.
Advertisement

ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

03:15 PM Jan 27, 2024 IST | suddionenews
ನಾಳೆ ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ
Advertisement

ಚಿತ್ರದುರ್ಗ ಜ. 27  : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜ. 28 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

Advertisement
Advertisement

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ನಗರದ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲಾ ಆವರಣ ಪಕ್ಕದ ಹೆಲಿಪ್ಯಾಡ್‍ಗೆ ಆಗಮಿಸುವರು.  ಬಳಿಕ ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು.

Advertisement

ನಂತರ ಬಳಿಕ ನಗರದ ಹೊರವಲಯದಲ್ಲಿರುವ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಕರ್ನಾಟಕ ಶೋಷಿತ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದ “ಶೋಷಿತ ಜಾಗೃತಿ ಸಮಾವೇಶ” ದಲ್ಲಿ ಭಾಗವಹಿಸುವರು.

Advertisement

ಮಧ್ಯಾಹ್ನ ಮಾಜಿ ಸಚಿವ ಹೆಚ್. ಆಂಜನೇಯ ಅವರ ನಿವಾಸಕ್ಕೆ ಭೇಟಿ ನೀಡುವರು.  ಬಳಿಕ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡುವರು.  ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 03 ಗಂಟೆಗೆ ನಗರದ ಎಸ್.ಜೆ.ಎಂ. ಆಂಗ್ಲ ಮಾಧ್ಯಮ ಶಾಲಾ ಆವರಣ ಪಕ್ಕದ ಹೆಲಿಪ್ಯಾಡ್‍ಗೆ ಆಗಮಿಸಿ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ತಿಳಿಸಿದ್ದಾರೆ.

Advertisement
Tags :
Advertisement