For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಲಾರಿಗೆ ಆಂಬುಲೆನ್ಸ್ ಡಿಕ್ಕಿ ; ಓರ್ವ ಮಹಿಳೆ ಮೃತ : ಇಬ್ಬರಿಗೆ ಗಾಯ...!

08:30 AM Aug 27, 2024 IST | suddionenews
ಚಿತ್ರದುರ್ಗ   ಲಾರಿಗೆ ಆಂಬುಲೆನ್ಸ್ ಡಿಕ್ಕಿ   ಓರ್ವ ಮಹಿಳೆ ಮೃತ   ಇಬ್ಬರಿಗೆ ಗಾಯ
Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 27 : ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಳೆಕಟ್ಟೆ ಗ್ರಾಮ ಬಳಿ ಈ ಘಟನೆ ನಡೆದಿದೆ.

Advertisement
Advertisement

ಹಾವೇರಿಯ ಶಿವಬಸವ (50) ಎಂಬುವವರು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ
ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹಾವೇರಿಗೆ ಖಾಸಗಿ ಆಂಬುಲೆನ್ಸ್ ನಲ್ಲಿ ಶಿವಬಸವ ಅವರ ಮೃತದೇಹವನ್ನು ಸಾಗಿಸುತ್ತಿದ್ದ ವೇಳೆ ಮೃತರ ಸಂಬಂಧಿ ಸರೋಜಮ್ಮ (52 ವರ್ಷ) ಎಂಬ ಮಹಿಳೆ ಅಪಘಾತದ ವೇಳೆ ಸಾವನ್ನಪ್ಪಿದ್ದಾರೆ. ಆಂಬುಲೆನ್ಸ್ ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement

Advertisement
Tags :
Advertisement