Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಅದ್ದೂರಿಯಾಗಿ ನೆರವೇರಿದ ಚನ್ನಕೇಶವಸ್ವಾಮಿಯ ರಥೋತ್ಸವ

09:45 PM Feb 24, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.24 : ಆಕಾಶವಾಣಿ ಸಮೀಪವಿರುವ ಚನ್ನಕೇಶವಸ್ವಾಮಿಯ ರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

Advertisement

ಶ್ರೀದೇವಿ ಭೂದೇವಿಯನ್ನು ರಥದಲ್ಲಿ ಕೂರಿಸಿ ವಿಶೇಷವಾಗಿ ಅಲಂಕರಿಸಿದ ನಂತರ ನೆರೆದಿದ್ದ ಭಕ್ತರು ರಥವನ್ನು ಎಳೆದಾಗ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸಲಾಯಿತು.
ತಿಪಟೂರಿನ ವಿನಾಯಕ ನಾದಸ್ವರದ ಮಂಜುಳ ಬಸವರಾಜ್ ಮತ್ತು ತಂಡದವರ ನಾದಸ್ವರ ಹಾಗೂ ತಬಲ ರಥೋತ್ಸವಕ್ಕೆ ಮೆರಗು ನೀಡಿತು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಹೋದರ ಕೆ.ಡಿ.ಪಿ.ಸದಸ್ಯ ಕೆ.ಸಿ.ನಾಗರಾಜ್, ಹಿರಿಯ ನ್ಯಾಯವಾದಿ ಫಾತ್ಯರಾಜನ್,
ಮಾರುತೇಶ್‍ರೆಡ್ಡಿ, ನಗರಸಭೆ ಮಾಜಿ ಸದಸ್ಯ ಡಿ.ಪ್ರಕಾಶ್ ಇನ್ನು ಅನೇಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruChannakesavaswamyChariot festivalchitradurgasuddionesuddione newsಚನ್ನಕೇಶವಸ್ವಾಮಿಯ ರಥೋತ್ಸವಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article