For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

05:25 PM Oct 27, 2024 IST | suddionenews
ಚಿತ್ರದುರ್ಗ   ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ
Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

Advertisement

ಟ್ರಸ್ಟ್ ನ ಕಾರ್ಯದರ್ಶಿ ಜೋಯ್ಸ್ ಹುಲಿರಾಜ್ ಅವರು ವೇದಘೋಷ ಮಾಡಿ ಸ್ವಾಗತಿಸಿದರು. ಸಂಚಾಲಕರಾದ ಗೋಪಾಲಕೃಷ್ಣ ಅವರು ದೇವತಾ ಪ್ರಾರ್ಥನೆ ಮಾಡಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

Advertisement

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಟಿ. ಕೆ. ನಾಗರಾಜ್,
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವ್ಯವಸ್ಥಾಪಕರು ಪ್ರಾಣೇಶಾಚಾರ ಕೊಪ್ಪರ, ಉತ್ತರಾದಿ ಮಠದ ವ್ಯವಸ್ಥಾಪಕರಾದ ವಿದ್ವಾನ್ ಪ್ರಭಂಜನಾಚಾರ ಕೂಸನೂರು, ಬ್ರಾಹ್ಮಣ ಸಂಘದ ನಿರ್ದೇಶಕರಾದ ರಾಘವೇಂದ್ರ, ಜಗಳೂರಿನ ಉಪ ತಹಶೀಲ್ದಾರ್ ಬದರಿನಾಥ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ಪ್ರೊಟೋಕಾಲ್ ಆಫೀಸರ್ ಶ್ರೀ ವೇಣುಗೋಪಾಲ್ ಸೇರಿದಂತೆ ಪಾರಾಯಣದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Advertisement

Advertisement
Advertisement
Tags :
Advertisement