For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಪಾರಿವಾಳದ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಬಾಲಕ..!

06:49 AM Jul 25, 2024 IST | suddionenews
ಚಿತ್ರದುರ್ಗ   ಹೃದಯ ವಿದ್ರಾವಕ ಘಟನೆ   ಪಾರಿವಾಳದ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಬಾಲಕ
Advertisement

ಸುದ್ದಿಒನ್, ಮೊಳಕಾಲ್ಮುರು, ಜುಲೈ. 25 : ವಿದ್ಯುತ್ ಕಂಬಕ್ಕೆ ಸಿಲುಕಿದ್ದ ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೊಳಕಾಲ್ಮುರು ತಾಲೂಕಿನ ಸಂತೇಗುಡ್ಡ ಗ್ರಾಪಂ ವ್ಯಾಪ್ತಿಯ ಹನುಮಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

Advertisement
Advertisement

ಪಾರಿವಾಳವೊಂದು ಆಕಸ್ಮಿಕವಾಗಿ ವಿದ್ಯುತ್ ಕಂಬದ ಮೇಲಿನ ತಂತಿಗೆ ಸಿಲುಕಿತ್ತು. ಮಳೆಗಾಲ ಬೇರೆ ಆಗಿರುವ ಕಾರಣ ವಿದ್ಯುತ್ ಶಾಕ್ ಪಸರಿಸುತ್ತಿದೆ. ಹೀಗಾಗಿ ತಂತಿ ಮೇಲೆ ಕೂತ ಪಾರಿವಾಳಕ್ಕೂ ಕರೆಂಟ್ ಶಾಕ್ ತಗುಲಿ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಇದನ್ನು ಕಂಡ ಬಾಲಕ, ಪಾರಿವಾಳವನ್ನು ರಕ್ಷಿಸಲು ಹೋಗಿದ್ದಾನೆ. ಆದರೆ ಈ ವೇಳೆ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ.

12 ವರ್ಷದ ರಾಮಚಂದ್ರ ಸಾವನ್ನಪ್ಪಿದ ಬಾಲಕ. ವಿದ್ಯುತ್ ಕಂಬದ ಮೇಲೇರಿ ಪಾರಿವಾಳವನ್ನು ರಕ್ಷಿಸಲು ಹೋಗಿ ತಾನೇ ಬಲಿಯಾಗಿದ್ದಾನೆ. ತಂತಿಯಲ್ಲಿ ಸಿಲುಕಿದ ಪಾರಿವಾಳವನ್ನು ರಕ್ಷಿಸುವಾಗ ಬಾಲಕನಿಗೆ ವಿದ್ಯುತ್ ಸ್ಪರ್ಶಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಣ್ಣೆದುರಿಗೆ ಮಗನ ಶವ ವಿದ್ಯುತ್ ಕಂಬದ ಮೇಲೆ ನೇತಾಡುತ್ತಿರುವುದನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ, ಪ್ರಾಣ ಕಳೆದುಕೊಳ್ಳುತ್ತಿದ್ದ ಪಕ್ಷಿಯನ್ನು ಉಳಿಸಲು ಹೋಗಿ ತಾನೇ ಪ್ರಾಣ ಕಳೆದುಕೊಂಡ  ಮಾನವೀಯತೆ ಮೆರೆದು ಸಾವನ್ನಪ್ಪಿರುವ 6ನೇ ತರಗತಿ ಓದುತ್ತಿದ್ದ ರಾಮಚಂದ್ರನ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Advertisement

Advertisement
Tags :
Advertisement