For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ನಾಳೆ ಮದುವೆ ನಿಶ್ಚಿತಾರ್ಥವಾಗಬೇಕಿದ್ದ  ಹೊಳಲ್ಕೆರೆ ಕೃಷಿ ಅಧಿಕಾರಿ ಅಪಘಾತದಲ್ಲಿ ಮೃತ್ಯು

11:10 AM Jan 20, 2024 IST | suddionenews
ಚಿತ್ರದುರ್ಗ   ನಾಳೆ ಮದುವೆ ನಿಶ್ಚಿತಾರ್ಥವಾಗಬೇಕಿದ್ದ  ಹೊಳಲ್ಕೆರೆ ಕೃಷಿ ಅಧಿಕಾರಿ ಅಪಘಾತದಲ್ಲಿ ಮೃತ್ಯು
Advertisement

Advertisement

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ನಗರದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿಯ ಏಕನಾಥೇಶ್ವರಿ ಲೇಔಟ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊಳಲ್ಕೆರೆ ಕೃಷಿ ಅಧಿಕಾರಿ (ತಾಂತ್ರಿಕ)  ಸಾವನ್ನಪ್ಪಿದ್ದಾರೆ.

Advertisement

ಹೊಳಲ್ಕೆರೆ ಕೃಷಿ ಇಲಾಖೆಯಲ್ಲಿ (ತಾಂತ್ರಿಕ) ಕಾರ್ಯ ನಿರ್ವಹಿಸುತ್ತಿದ್ದ ವಿಶಾಲ್ ಕುಮಾರ್ (28 ವರ್ಷ) ಅವರು ಎಂದಿನಂತೆ ಚಿತ್ರದುರ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ಕರ್ತವ್ಯ ನಿಮಿತ್ತ ಹೋಗುತ್ತಿದ್ದಾಗ ಶನಿವಾರ ಬೆಳಿಗ್ಗೆ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿಶಾಲ್ ಕುಮಾರ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

Advertisement
Advertisement

ನಾಳೆ ಇವರ ಮದುವೆಯ ನಿಶ್ಚಿತಾರ್ಥ ಇತ್ತು ಎಂದು ತಿಳಿದು ಬಂದಿದ್ದು. ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸುವ ಕನಸು ಕಾಣುತ್ತಿದ್ದ ಕೃಷಿ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಕುಟುಂಬದ ಸದಸ್ಯರು ಆಗಮಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Tags :
Advertisement