Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಟಿ.ಎಮ್ಮಿಗನೂರು ಗ್ರಾಮದಲ್ಲಿ ಬಾಲ್ಯ ವಿವಾಹ : ಪ್ರಕರಣ ದಾಖಲು

07:20 PM Aug 23, 2024 IST | suddionenews
Advertisement

ಚಿತ್ರದುರ್ಗ. ಆ.23: ಹೊಳಲ್ಕೆರೆ ತಾಲ್ಲೂಕಿನ ಟಿ.ಎಮ್ಮಿಗನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹವಾಗಲು ಸಿದ್ದವಾಗಿದ್ದ ರಂಗಸ್ವಾಮಿ.ಆರ್.ಟಿ. ಎಂಬ ಯುವಕನ ವಿರುದ್ದ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಾಗಿದೆ.

Advertisement

ಹೊಳಲ್ಕೆರೆ ತಾಲೂಕಿನ ಟಿ.ಎಮ್ಮಿಗನೂರು
ಸಿಡಿಪಿಓ ಕಚೇರಿಯ ಮಹಿಳಾ ಮೇಲ್ವಿಚಾರಕಿ ಲಕ್ಷ್ಮಮ್ಮ ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ವೇಳೆಗಾಗಲೇ ಮದುವೆ ಮುಗಿದಿತ್ತು. ವಧು-ವರನ ವಯಸ್ಸಿನ ಬಗ್ಗೆ ಪೋಷಕರು ಮಾಹಿತಿಯನ್ನು ಗೌಪ್ಯವಾಗಿಟ್ಟಿದ್ದರು. ಆದರೆ ಶಾಲಾ ದಾಖಲಾತಿ ಪರಿಶೀಲಿಸಿದಾಗ ವಧು ಅಪ್ರಾಪ್ತಳೆಂಬುದು ಪತ್ತೆಯಾಗಿದೆ.

ಬಾಲ್ಯ ವಿವಾಹ ಜರುಗುತ್ತಿರುವ ಕುರಿತ ಮಾಹಿತಿ ಆಧಿರಿಸಿ, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಯುವಕ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಐಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

Advertisement

Advertisement
Tags :
bengaluruchild marriagechitradurgaFile a casesuddionesuddione newsT.Emmiganurಚಿತ್ರದುರ್ಗಟಿ.ಎಮ್ಮಿಗನೂರುಪ್ರಕರಣ ದಾಖಲುಬಾಲ್ಯ ವಿವಾಹಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article