For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಮಾರ್ಚ್ 17 ರಂದು ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ

04:49 PM Mar 15, 2024 IST | suddionenews
ಚಿತ್ರದುರ್ಗ   ಮಾರ್ಚ್ 17 ರಂದು ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.15 : ಸುಣ್ಣಗಾರರ ಬೀದಿ ಕರುವಿನಕಟ್ಟೆ ಸರ್ಕಲ್‍ನಲ್ಲಿರುವ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ ಮತ್ತು ಭೂಮಿ ಪೂಜೆ ಕಾರ್ಯಕ್ರಮ ಮಾ.17 ರಂದು ಬೆಳಿಗ್ಗೆ 10-25 ಕ್ಕೆ ನಡೆಯಲಿದೆ.

Advertisement
Advertisement

ಆದಿಶಂಕರಚಾರ್ಯ ಲಕ್ಷ್ಮಿನೃಸಿಂಹ ಹರಿಹರಪುರದ ಪೀಠಾಧ್ಯಕ್ಷರಾದ ಸ್ವಾಮಿ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿ, ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮಿ, ಡಾ.ಶಾಂತವೀರ ಮಹಾಸ್ವಾಮಿ, ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಬಸವ ಮಡಿವಾಳ ಮಾಚಿದೇವಸ್ವಾಮಿ, ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ, ಕೃಷ್ಣಯಾದವಾನಂದಸ್ವಾಮಿ, ದೇವಾಲಯ ಸಂವರ್ಧನಾ ಸಮಿತಿಯ ಮನೋಹರ್ ಮಠದ ಇವರುಗಳು ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಕೆ.ಸಿ.ವೀರೇಂದ್ರಪಪ್ಪಿ, ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಇವರುಗಳು ಆಗಮಿಸಲಿದ್ದಾರೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು, ಮನ, ಧನ ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ
ಎನ್.ಓಂಕಾರ್ ಮನವಿ ಮಾಡಿದ್ದಾರೆ.
ಹೆಚ್ಚಿನ ವಿವರಗಳಿಗೆ ಮೊ : 9844148872, 8123466164 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Advertisement
Tags :
Advertisement