Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಮಾರ್ಚ್ 17 ರಂದು ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ

04:49 PM Mar 15, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.15 : ಸುಣ್ಣಗಾರರ ಬೀದಿ ಕರುವಿನಕಟ್ಟೆ ಸರ್ಕಲ್‍ನಲ್ಲಿರುವ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಷಢಾದಾರ ಪ್ರತಿಷ್ಠಾಪನೆ ಮತ್ತು ಭೂಮಿ ಪೂಜೆ ಕಾರ್ಯಕ್ರಮ ಮಾ.17 ರಂದು ಬೆಳಿಗ್ಗೆ 10-25 ಕ್ಕೆ ನಡೆಯಲಿದೆ.

Advertisement

ಆದಿಶಂಕರಚಾರ್ಯ ಲಕ್ಷ್ಮಿನೃಸಿಂಹ ಹರಿಹರಪುರದ ಪೀಠಾಧ್ಯಕ್ಷರಾದ ಸ್ವಾಮಿ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮಿ, ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮಿ, ಡಾ.ಶಾಂತವೀರ ಮಹಾಸ್ವಾಮಿ, ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ, ಬಸವ ಮಡಿವಾಳ ಮಾಚಿದೇವಸ್ವಾಮಿ, ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ, ಕೃಷ್ಣಯಾದವಾನಂದಸ್ವಾಮಿ, ದೇವಾಲಯ ಸಂವರ್ಧನಾ ಸಮಿತಿಯ ಮನೋಹರ್ ಮಠದ ಇವರುಗಳು ಸಾನಿಧ್ಯ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕರುಗಳಾದ ಕೆ.ಸಿ.ವೀರೇಂದ್ರಪಪ್ಪಿ, ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಇವರುಗಳು ಆಗಮಿಸಲಿದ್ದಾರೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು, ಮನ, ಧನ ಅರ್ಪಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಕಾರ್ಯಕಾರಿ ಸಮಿತಿ ಅಧ್ಯಕ್ಷ
ಎನ್.ಓಂಕಾರ್ ಮನವಿ ಮಾಡಿದ್ದಾರೆ.
ಹೆಚ್ಚಿನ ವಿವರಗಳಿಗೆ ಮೊ : 9844148872, 8123466164 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Advertisement
Tags :
bengaluruchitradurgainaugurationLakshminarasimhaswamy templeMarchShadhadarsuddionesuddione newsಚಿತ್ರದುರ್ಗಪ್ರತಿಷ್ಠಾಪನೆಬೆಂಗಳೂರುಮಾರ್ಚ್‌ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನಷಢಾದಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article