ಚಿತ್ರದುರ್ಗ | ನಗರಸಭೆಯಿಂದ ಮದ್ಯದಂಗಡಿಗಳ ಮೇಲೆ ದಾಳಿ : ನಿಷೇಧಿತ ಪ್ಲಾಸ್ಟಿಕ್ ಲೋಟಗಳ ವಶ
05:38 PM May 07, 2024 IST
|
suddionenews
Tags :
Advertisement
Advertisement
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 07 : ನಗರದ ಅನೇಕ ಬಾರ್ ಗಳ ಮೇಲೆ ನಗರಸಭೆಯವರು ದಾಳಿ ನಡೆಸಿ ಪ್ಲಾಸ್ಟಿಕ್ ಕಪ್ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ.
Advertisement
ಐಸಿರಿ, ಸಮೃದ್ದಿ, ಚಳ್ಳಕೆರೆ ಟೋಲ್ಗೇಟ್ನಲ್ಲಿ ರವಿ ಬಾರ್ ಅಂಡ್ ರೆಸ್ಟೊರೆಂಟ್ ಹಾಗೂ ಮಧುಲೋಕ ಬಾರ್ಗಳ ಮೇಲೆ ದಾಳಿ ನಡೆಸಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಲೋಟಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿ ಇನ್ನು ಮುಂದೆ ಬಳಸಿದರೆ ಪರವಾನಗಿ ರದ್ದುಗೊಳಿಸುವುದಾಗಿ ಬಾರ್ ಮಾಲೀಕರುಗಳಿಗೆ ಎಚ್ಚರಿಕೆ ನೀಡಿದರು.
ನಗರಸಭೆ ಪರಿಸರ ಇಂಜಿನಿಯರ್ ಜಾಫರ್, ಹೆಲ್ತ್ ಇನ್ಸ್ಪೆಕ್ಟರ್ಗಳಾದ ಸರಳ, ಭಾರತಿ, ನಾಗರಾಜ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
Advertisement
bannedbengaluruchitradurgaLiquor shopsMunicipal Councilplastic cups seizedsuddionesuddione newsಚಿತ್ರದುರ್ಗನಗರಸಭೆಪ್ಲಾಸ್ಟಿಕ್ ನಿಷೇಧಿಸಿಬೆಂಗಳೂರುಮದ್ಯದಂಗಡಿಗಳ ಮೇಲೆ ದಾಳಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article