For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ ಲೋಕಸಭಾ ಚುನಾವಣೆ | ಈ ಬಾರಿ ಬಿಜೆಪಿ ಪಕ್ಷದಿಂದ ನಾನೂ ಸ್ಪರ್ಧಾಕಾಂಕ್ಷಿ : ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ

04:00 PM Feb 28, 2024 IST | suddionenews
ಚಿತ್ರದುರ್ಗ ಲೋಕಸಭಾ ಚುನಾವಣೆ   ಈ ಬಾರಿ ಬಿಜೆಪಿ ಪಕ್ಷದಿಂದ ನಾನೂ ಸ್ಪರ್ಧಾಕಾಂಕ್ಷಿ   ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ
Advertisement

Advertisement
Advertisement

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ. ಫೆಬ್ರವರಿ 28 : ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಹಲವಾರು ಜನಪರವಾದ ಕೆಲಸವನ್ನು ಮಾಡಿದ್ದೇನೆ. ನನ್ನ ಅಭಿಮಾನಿಗಳು ಹಿತೈಷಿಗಳು ರಾಜಕೀಯಕ್ಕೆ ಬನ್ನಿ ಎಂಬ ಒತ್ತಾಯದ ಮೇರೆಗೆ ರಾಜಕೀಯಕ್ಕೆ ಬರುತ್ತಿದ್ದು ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿವತಿಯಿಂದ ಟಿಕೆಟ್ ಕೇಳಿದ್ದೇನೆ. ಅದರೆ ಪಕ್ಷದ ವರಿಷ್ಟರು ಯಾವುದೇ ರೀತಿಯ ಭರವಸೆಯನ್ನು ನೀಡಿಲ್ಲ ಎಂದು ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ 2024 ರಲ್ಲಿ ಕೆಲಸವನ್ನು ಮಾಡಿದ್ದೇನೆ, ಇಲ್ಲಿನ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಹಿಡಿದಿದ್ದೆನೆ. ಇಷ್ಟಲ್ಲದೆ ಹಲವಾರು ಜನತೆಯ ವಿವಿಧ ರೀತಿಯ ಸಮಸ್ಯೆಯನ್ನು ಬಗೆಹರಿಸಿದ್ದೇನೆ. ಇದರೊಂದಿಗೆ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳ ಪರಿಚಯ ವಿದ್ದು, ಅಲ್ಲಿನ ಜನತೆಯ ನಡುವೆ ಒಡನಾಟ ಇದೆ, ಜನಪ್ರತಿನಿಧಿಗಳೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿದ್ದೇನೆ, 2014 ರಲ್ಲಿ ವಿವಿಧ ರೀತಿಯ ಚುನಾವಣೆಯನ್ನು ಮಾಡಿದ್ದೆನೆ, ಚಿತ್ರದುರ್ಗ ಲೋಕಸಭಾ 8 ಕ್ಷೇತ್ರಗಳ ಪರಿಚಯವಿದ್ದು, ಇಲ್ಲಿನ ಆಗು ಹೋಗುಗಳನ್ನು ತಿಳಿದಿದ್ದೇನೆ ಇದರಿಂದ ಈ ಬಾರಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಫರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದರು.

ಬಿಜೆಪಿಯ ವರಿಷ್ಠರನ್ನು ಹಲವಾರು ಭೇಟಿಯಾಗಿದ್ದೇನೆ, ನನಗೆ ಟೀಕೆಟ್ ನೀಡುವಂತೆ ಮನವಿ ಮಾಡಿದ್ದೇನೆ ಈಗ ಹಾಲಿ ಸಂಸದರು ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ನಾನು ಕಣಕ್ಕೆ ಇಳಿದಿದ್ದೇನೆ, ಈ ಕ್ಷೇತ್ರದಲ್ಲಿ ಮಾದಿಗ ಎಡಗೈ ಸಮುದಾಯದವರ ಸುಮಾರು 4 ರಿಂದ 5 ಲಕ್ಷ ಮತದಾರರಿದ್ದಾರೆ. ಈಗಾಗಲೇ ಒಂದು ಬಾರಿ ಕ್ಷೇತ್ರದ ನಾಯಕರನ್ನು ಭೇಟಿ ಮಾಡಿದ್ದೇನೆ ಇನ್ನು ಮತದಾರರನ್ನು ಭೇಟಿ ಮಾಡಿಲ್ಲ ಮುಂದಿನ ದಿನದಲ್ಲಿ ಅವರನ್ನು ಸಹಾ ಭೇಟಿ ಮಾಡುವುದರ ಮೂಲಕ ಜಿಲ್ಲಾಧಿಕಾರಿಯಾಗಿದ್ದಾಗ ನಾನು ಮಾಡಿದ ವಿವಿಧ ರೀತಿಯ ಕೆಲಸಗಳನ್ನು ಅವರಿಗೆ ತಿಳಿಸಿಕೊಡಲಾಗುವುದು ಎಂದು ಶ್ರೀರಂಗಯ್ಯ ತಿಳಿಸಿದರು.

ಬಿಜೆಪಿ ಪಕ್ಷದಲ್ಲಿ ನಾನು ಟೀಕೇಟ್ ಕೇಳಿದ್ದೇನೆ ಪಕ್ಷ ತೀರ್ಮಾನ ಮಾಡಿ ನನಗೆ ಟೀಕೆಟ್ ನೀಡಿದರೆ ಸ್ಪರ್ದೆ ಮಾಡುತ್ತೇನೆ, ಇಲ್ಲವಾದಲ್ಲಿ ಕಾರ್ಯಕರ್ತನಾಗಿ ಪಕ್ಷ ಯಾರಿಗೆ ಟೀಕೇಟ್ ನೀಡುತ್ತದ್ದೇಯೇ ಅವರ ಪರವಾಗಿ ಕೆಲಸವನ್ನು ಮಾಡುತ್ತೇನೆ, ನಾನು ಸಹಾ ಸ್ಥಳಿಯನಾಗಿದ್ದೇನೆ, ಹೂರಗಿನಿಂದ ಬಂದವನಲ್ಲ, ಗಡಿ ಪ್ರದೇಶದಲ್ಲಿ ನಮ್ಮ ಪರಿವಾರ ಇದೆ ಎಂದು ಸ್ಪಷ್ಟಪಡಿಸಿದರು.

ಗೋಷ್ಟಿಯಲ್ಲಿ ತಾಲ್ಲೂಕು ಪಂಚಾಯಿ ಮಾಜಿ ಸದಸ್ಯ ಮೋಹನ್, ಗ್ರಾಮ ಪಂಚಾಯಿತಿ ಸದಸ್ಯ ರಂಗಯ್ಯ ಉಪಸ್ಥಿತರಿದ್ದರು.

Advertisement
Tags :
Advertisement