For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ರೈಲಿಗೆ ಸಿಲುಕಿ ವ್ಯಕ್ತಿ ಮೃತ್ಯು : ಗುರುತು ಪತ್ತೆಗೆ ಮನವಿ

07:13 PM Sep 04, 2024 IST | suddionenews
ಚಿತ್ರದುರ್ಗ   ರೈಲಿಗೆ ಸಿಲುಕಿ ವ್ಯಕ್ತಿ ಮೃತ್ಯು   ಗುರುತು ಪತ್ತೆಗೆ ಮನವಿ
Advertisement

ಚಿತ್ರದುರ್ಗ. ಸೆ.04: ಚಿತ್ರದುರ್ಗ ಹಾಗೂ ಬಾಲೇನಹಳ್ಳಿ ರೈಲು ನಿಲ್ದಾಣಗಳ ಮಧ್ಯೆ ಚಿತ್ರದುರ್ಗ ನಗರದ ಎಪಿಎಂಸಿ ಬಳಿ ರೈಲು ಗಾಡಿಗೆ ಸಿಲುಕಿ ಸು. 30-35ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಕುರಿತು ಬುಧವಾರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

ಮೃತ ವ್ಯಕ್ತಿಯು ಸು.5.5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈ ಬಣ್ಣ, ತಲೆಯಲ್ಲಿ ಸು.2 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಗಡ್ಡ ಮೀಸೆ ಹೊಂದಿದ್ದು, ಎಡಗೈಯಲ್ಲಿ ಊಂಖSಊA ಉ ಎಂಬ ಅಚ್ಚೆ ಗುರುತು ಇದೆ. ನೀಲಿ ಬಣ್ಣದ ಜರ್ಕಿನ್, ಬಿಳಿ ಬಣ್ಣದ ಸೀಮೆಂಟ್ ಪಟ್ಟಿಯ ರೆಡಿಮೇಡ್ ಅಂಗಿ, ನೀಲಿ ಬಣ್ಣದ ಪ್ಯಾಂಟ್, ಕಾಫಿ ಬಣ್ಣದ ಟೀ ಶರ್ಟ್ ಹಾಗೂ ಆರ್.ಕೆ.ಜಿ ಕಂಪನಿಯ ಅಂಡರ್ ವೇರ್ ಧರಿಸಿರುತ್ತಾರೆ.

Advertisement

ಈ ಮೇಲ್ಕಂಡ ಅಪರಿಚಿತ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ದೂರವಾಣಿ ಸಂಖ್ಯೆ 9480802123 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Tags :
Advertisement