Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ರೈಲಿಗೆ ಸಿಲುಕಿ ವ್ಯಕ್ತಿ ಮೃತ್ಯು : ಗುರುತು ಪತ್ತೆಗೆ ಮನವಿ

07:13 PM Sep 04, 2024 IST | suddionenews
Advertisement

ಚಿತ್ರದುರ್ಗ. ಸೆ.04: ಚಿತ್ರದುರ್ಗ ಹಾಗೂ ಬಾಲೇನಹಳ್ಳಿ ರೈಲು ನಿಲ್ದಾಣಗಳ ಮಧ್ಯೆ ಚಿತ್ರದುರ್ಗ ನಗರದ ಎಪಿಎಂಸಿ ಬಳಿ ರೈಲು ಗಾಡಿಗೆ ಸಿಲುಕಿ ಸು. 30-35ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುವ ಕುರಿತು ಬುಧವಾರ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

ಮೃತ ವ್ಯಕ್ತಿಯು ಸು.5.5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಶರೀರ, ಗೋಧಿ ಮೈ ಬಣ್ಣ, ತಲೆಯಲ್ಲಿ ಸು.2 ಇಂಚು ಉದ್ದದ ಕಪ್ಪು ಕೂದಲು, ಕುರುಚಲು ಗಡ್ಡ ಮೀಸೆ ಹೊಂದಿದ್ದು, ಎಡಗೈಯಲ್ಲಿ ಊಂಖSಊA ಉ ಎಂಬ ಅಚ್ಚೆ ಗುರುತು ಇದೆ. ನೀಲಿ ಬಣ್ಣದ ಜರ್ಕಿನ್, ಬಿಳಿ ಬಣ್ಣದ ಸೀಮೆಂಟ್ ಪಟ್ಟಿಯ ರೆಡಿಮೇಡ್ ಅಂಗಿ, ನೀಲಿ ಬಣ್ಣದ ಪ್ಯಾಂಟ್, ಕಾಫಿ ಬಣ್ಣದ ಟೀ ಶರ್ಟ್ ಹಾಗೂ ಆರ್.ಕೆ.ಜಿ ಕಂಪನಿಯ ಅಂಡರ್ ವೇರ್ ಧರಿಸಿರುತ್ತಾರೆ.

Advertisement

ಈ ಮೇಲ್ಕಂಡ ಅಪರಿಚಿತ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ದೂರವಾಣಿ ಸಂಖ್ಯೆ 9480802123 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Tags :
bengaluruchitradurgaman diesRequest for identificationsuddionesuddione newsಗುರುತು ಪತ್ತೆಗೆ ಮನವಿಚಿತ್ರದುರ್ಗಬೆಂಗಳೂರುರೈಲಿಗೆ ಸಿಲುಕಿ ವ್ಯಕ್ತಿ ಮೃತ್ಯುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article