Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

07:51 AM May 10, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿದ್ದು, ಶುಕ್ರವಾರ ಬೆಳಿಗ್ಗೆಯಾದರೂ ತೆರವುಗೊಳಿಸುವ ಕಾರ್ಯ ಆಗದೇ, ಸಂಚಾರಕ್ಕೆ ಅಡಚಣೆಯಾಗಿದೆ.

ಜಿ ಸೆವೆನ್ ಮಾರ್ಟ್ ಪಕ್ಕದ ರಸ್ತೆಯಲ್ಲಿರುವ ಮರಳುಸಿದ್ದೇಶ್ವರ ನಿಲಯದ ಮನೆಯ ಮುಂಭಾಗದಲ್ಲಿರುವ ಬೃಹದಾಕಾರವಾದ ಮರದ ದೊಡ್ಡ ಕೊಂಬೆಯು ಗಾಳಿಗೆ ಮುರಿದು ಬಿದ್ದ ಸಂದರ್ಭದಲ್ಲಿ ಅಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ.

Advertisement

ಅಕ್ಕಪಕ್ಕದವರು ನಗರಸಭೆಯವರಿಗೆ ಮಾಹಿತಿ ನೀಡಿದ್ದರೂ ತೆರವುಗೊಳಿಸುವ ಕೆಲಸವಾಗಿಲ್ಲ. ದ್ವಿಚಕ್ರ ವಾಹನೊಂದು ಬಿಟ್ಟರೆ ಬೇರೆ ಯಾವ ವಾಹನವೂ ಸಂಚರಿಸಲು ಜಾಗವಿಲ್ಲ. ದಿನವಿಡೀ ರಸ್ತೆ ಬಂದ್ ಆಗಿತ್ತು. ನಮ್ಮ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಸಂಕಷ್ಟ ತೋಡಿಕೊಂಡರು. ಇಂದಾದರೂ ತೆರವುಗೊಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Advertisement
Tags :
bengaluruchitradurgaMunicipal Councilsuddionesuddione newstree branchಚಿತ್ರದುರ್ಗತೆರವುನಗರಸಭೆಬೆಂಗಳೂರುಮರದ ಕೊಂಬೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article