Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯಲ್ಲಿ ಆರ್.ಅಶೋಕ್ ಭಾಗಿ

07:07 PM Oct 04, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ಯುದ್ದಕ್ಕೆ ಇಳಿದಿದ್ದೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯಬಾರದು. ಕೇಂದ್ರದಲ್ಲಿ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿರವರ ಕೈಬಲಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿವಿಧ ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಕರೆ ನೀಡಿದರು.

Advertisement

ದಾವಣಗೆರೆ ರಸ್ತೆಯಲ್ಲಿರುವ ಜಗಳೂರು ಮಹಲಿಂಗಪ್ಪ ಕಂಫರ್ಟ್ಸ್ ನಲ್ಲಿ ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಧುಗಿರಿ ಜಿಲ್ಲೆಗಳ ವಿವಿಧ ಮಂಡಲ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಶುಕ್ರವಾರ ನಡೆದ ಬಿಜೆಪಿ. ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಾಥಮಿಕ ಸದಸ್ಯತ್ವದ ಗುರಿ ಎಷ್ಟು, ಎಷ್ಟು ಸದಸ್ಯತ್ವವಾಗಿದೆ. ಗುರಿ ತಲುಪಲು ಏಕೆ ಸಾಧ್ಯವಾಗಿಲ್ಲ. ಉಳಿದಿರುವ ಇನ್ನು ಹದಿನಾಲ್ಕು ದಿನಗಳಲ್ಲಿ ಎಷ್ಟು ಸದಸ್ಯತ್ವ ಮಾಡಬಹುದು ಎನ್ನುವುದರ ಬಗ್ಗೆ ಚರ್ಚಿಸಿದ ಆರ್.ಅಶೋಕ್ ಗಣೇಶ್ ಹಬ್ಬ ಮುಗಿಯಿತು. ಈಗ ನವರಾತ್ರಿ ಬಂದಿದೆ. ಮನೆಯಲ್ಲಿ ವಯಸ್ಸಾದವರು ಸತ್ತಿದ್ದಾರೆ. ತಾಲ್ಲೂಕು ಅಧ್ಯಕ್ಷ, ಜಿಲ್ಲಾ ಪದಾಧಿಕಾರಿಗಳು ಸರಿಯಿಲ್ಲ ಎನ್ನುವ ಯಾವ ಕಾರಣವನ್ನು ಹೇಳುವಂತಿಲ್ಲ. ಭಾರತೀಯ ಜನತಾಪಕ್ಷವನ್ನು ಪ್ರಜಾಪ್ರಭುತ್ವ ಪಕ್ಷವನ್ನಾಗಿಸಬೇಕಾಗಿರುವುದರಿಂದ ನಿಮಗೆ ನೀಡಿರುವ ಗುರಿ ತಲುಪಬೇಕೆಂದು ಸೂಚಿಸಿದರು.

ಬಿಜೆಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‍ರೆಡ್ಡಿ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಎಸ್.ನವೀನ್, ಚಿದಾನಂದಗೌಡ, ಧನಂಜಯ

ಸರ್ಜಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶ್ರೀಮತಿ ಗಾಯತ್ರಿ ಸಿದ್ದೇಶ್ವರ್, ಮಧುಗಿರಿ ಜಿಲ್ಲಾ ಬಿಜೆಪಿ.ಅಧ್ಯಕ್ಷ ಹನುಮಂತೆಗೌಡ, ಕೆ.ಟಿ.ಕುಮಾರಸ್ವಾಮಿ ಇನ್ನು ಅನೇಕರು ವೇದಿಕೆಯಲ್ಲಿದ್ದರು.

Advertisement
Tags :
bengaluruBJP membership campaignchitradurgar ashoksuddionesuddione newsಆರ್ ಅಶೋಕ್ಚಿತ್ರದುರ್ಗಬಿಜೆಪಿಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article