For the best experience, open
https://m.suddione.com
on your mobile browser.
Advertisement

ಚಿತ್ರದುರ್ಗ | ಆನೆ ಬಾಗಿಲ ಗಣಪತಿ, ಆಂಜನೇಯಸ್ವಾಮಿ ಹಾಗೂ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

05:53 PM Jan 22, 2024 IST | suddionenews
ಚಿತ್ರದುರ್ಗ   ಆನೆ ಬಾಗಿಲ ಗಣಪತಿ  ಆಂಜನೇಯಸ್ವಾಮಿ ಹಾಗೂ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.22 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ನಗರದ ಆನೆಬಾಗಿಲು ಸಮೀಪವಿರುವ ಗಣಪತಿ ಹಾಗೂ ಆಂಜನೇಯಸ್ವಾಮಿ, ವೆಂಕಟೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಪೂಜೆ ಸಲ್ಲಿಸಲಾಯಿತು.

Advertisement
Advertisement

ನೂರಾರು ಭಕ್ತರು ಧಾವಿಸಿ ಗಣಪತಿ ಹಾಗೂ ಆಂಜನೇಯನ ದರ್ಶನ ಪಡೆದು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿ ಶ್ರೀರಾಮನ ಜಪ ಮಾಡಿದರು.

ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದ ಮುಂಭಾಗ ಶ್ರೀರಾಮನ ಬೃಹಧಾಕಾರವಾದ ಪೋಟೋ ಇಟ್ಟು ಪೂಜೆ ಸಲ್ಲಿಸಲಾಯಿತು. ಕೋಟೆ ರಸ್ತೆಯಲ್ಲಿರುವ ಮಲ್ಲಿಕಾರ್ಜುನಸ್ವಾಮಿ ಹಾಗೂ ಬರಗೇರಮ್ಮ, ನೀಲಕಂಠೇಶ್ವರಸ್ವಾಮಿ ದೇವಾಲಯಗಳಲ್ಲಿ ಪೂಜೆ ನಡೆಯಿತು. ಬಹುತೇಕ ದೇವಾಲಯಗಳಲ್ಲಿ ಕೋಸಂಬರಿ ಪಾನಕ ವಿತರಿಸಲಾಯಿತು.

ನಗರದ ಮುಖ್ಯ ರಸ್ತೆಗಳಲ್ಲಿ ಶ್ರೀರಾಮನ ಭಾವಚಿತ್ರವಿರುವ ಕೇಸರ ಭಾವುಟಗಳು ರಾರಾಜಿಸಿದವು. ಅಲ್ಲಲ್ಲಿ ಆಟೋ ನಿಲ್ದಾಣ, ವಾಣಿಜ್ಯ ಮಳಿಗೆಗಳ ಮೇಲೆ ಹಾಗೂ ವಿದ್ಯುತ್ ಕಂಬಗಳಿಗೆ ಶ್ರೀರಾಮನ ಫೋಟೋ ಕಟ್ಟಿ ಪೂಜಿಸಲಾಯಿತು.

Advertisement
Tags :
Advertisement