Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಸರ್ಕಾರದ ನಿಯಮಾನುಸಾರ ಪೊಲೀಸರ ವರ್ಗಾವಣೆ ಮಾಡಿ : ಕರುನಾಡ ವಿಜಯಸೇನೆ ಒತ್ತಾಯ

05:35 PM Aug 02, 2024 IST | suddionenews
Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 02 : ಐದು ವರ್ಷಗಳ ಮೇಲ್ಪಟ್ಟು ಒಂದೆ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹಾಗೂ ಇಲಾಖೆಯಲ್ಲಿರುವ ಎಲ್ಲಾ ಅಂಗ ರಕ್ಷಕರನ್ನು ಸರ್ಕಾರದ ಆದೇಶದಂತೆ ವರ್ಗಾವಣೆಗೊಳಿಸಬೇಕೆಂದು ಕರುನಾಡ ವಿಜಯಸೇನೆಯಿಂದ ಹೆಚ್ಚುವರಿ ರಕ್ಷಣಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಒಂದೇ ಠಾಣೆಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ವರ್ಗಾಣೆಗೊಳಿಸುವಂತೆ ಗೃಹ ಇಲಾಖೆಯು ಆದೇಶಿಸಿದ್ದು, ಜಿಲ್ಲೆಯಲ್ಲಿ ಕೆಲವು ಪೊಲೀಸರನ್ನು ವರ್ಗಾವಣೆಗೊಳಿಸಿರುವುದು ಯಾವ ನ್ಯಾಯ? ವರ್ಗಾವಣೆ ವಿಚಾರ ಬಂದಾಗ ನಿಯಮಾವಳಿ ಪ್ರಕಾರ ವರ್ಗಾವಣೆಯಾಗಬೇಕು. ಜಿಲ್ಲೆಯ ಕೆಲವು ಠಾಣೆಗಳಲ್ಲಿ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿರುವವರನ್ನು ಕೂಡಲೆ ಬೇರೆಡೆ ವರ್ಗಾವಣೆಗೊಳಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಹೆಚ್ಚುವರಿ ರಕ್ಷಣಾಧಿಕಾರಿಯವರಲ್ಲಿ ವಿನಂತಿಸಿದರು.

Advertisement

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿಗಳಾದ ಅಣ್ಣಪ್ಪ, ಜಗದೀಶ್ ಸಿ. ಉಪಾಧಕ್ಷ ಮುಜಾಹಿದ್, ನಗರಾಧ್ಯಕ್ಷ ಪಿ.ಅವಿನಾಶ್, ಪಾಂಡು, ನಾಗರಾಜ್ ಮುತ್ತು, ಮಧುಸೂಧನ್, ಸುರೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgagovernment rulesinsistsKarunada Vijaya Senapolicesuddionesuddione newsTransferಒತ್ತಾಯಕರುನಾಡ ವಿಜಯಸೇನೆಚಿತ್ರದುರ್ಗನಿಯಮಾನುಸಾರಪೊಲೀಸರುಬೆಂಗಳೂರುವರ್ಗಾವಣೆಸರ್ಕಾರಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article