Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ | ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಅನಾಮದೇಯ ಶವ ಪತ್ತೆ : ಗುರುತಿಗೆ ಮನವಿ

02:30 PM Sep 06, 2024 IST | suddionenews
Advertisement

 

Advertisement

 

ಚಿತ್ರದುರ್ಗ. ಸೆ. 06: ಚಿತ್ರದುರ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರು ಇರುವ ಸಿಟಿ ಹೋಟೆಲ್ ಪಕ್ಕದಲ್ಲಿರುವ ಮಳಿಗೆ ಮುಂಭಾಗದ ಮೆಟ್ಟಿಲಿನ ಮೇಲೆ ಸುಮಾರು 55-60 ವರ್ಷದ ಅನಾಮಧೇಯ ವ್ಯಕ್ತಿ ಶವ ಪತ್ತೆಯಾದ ಕುರಿತು ಸೆ.5ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಅನಾಮಧೇಯ ವ್ಯಕ್ತಿಯು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ತಲೆಯಲ್ಲಿ ಕಪ್ಪು ಮತ್ತು ಬಿಳಿ ಕೂದಲು, ಗಡ್ಡ ಮೀಸೆ ಇರುತ್ತದೆ. ಎರಡೂ ಕಾಲುಗಳಿಗೆ ಬ್ಯಾಂಡೇಜ್ ಸುತ್ತಿರುವುದು ಕಂಡು ಬಂದಿರುತ್ತದೆ. ಮೃತನ ಮೈಮೇಲೆ ಮಾಸಲು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಬನಿಯನ್, ನಶಿ ಕಲರ್ ಚಡ್ಡಿ ಇರುತ್ತದೆ.

ಮೃತ ಅನಾಮಧೇಯ ವ್ಯಕ್ತಿಯ ಕುರಿತು ಮಾಹಿತಿ ತಿಳಿದುಬಂದಲ್ಲಿ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ದೂರವಾಣಿ ಸಂಖ್ಯೆ 08194-222933. 9480803145, ಪೊಲೀಸ್ ಉಪಾಧೀಕ್ಷಕರ ದೂರವಾಣಿ ಸಂಖ್ಯೆ 08194-222430, 9480803120, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08194-222782 ಗೆ ಸಂಪರ್ಕಿಸುವಂತೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಪಿಎಸ್‌ಐ ತಿಳಿಸಿದ್ದಾರೆ.

Advertisement
Tags :
anonymousbengaluruchitradurgaKSRTC bus standsuddionesuddione newsಅನಾಮದೇಯ ಶವ ಪತ್ತೆಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗುರುತಿಗೆ ಮನವಿಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article