For the best experience, open
https://m.suddione.com
on your mobile browser.
Advertisement

ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ : ಪ್ರವೀಣ್ ಶೆಟ್ಟಿ ಬಣದ ಕರವೇ ಒತ್ತಾಯ

06:37 PM Dec 13, 2023 IST | suddionenews
ಅನ್ಯ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಿ   ಪ್ರವೀಣ್ ಶೆಟ್ಟಿ ಬಣದ ಕರವೇ ಒತ್ತಾಯ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

Advertisement

ಸುದ್ದಿಒನ್, ನಾಯಕನಹಟ್ಟಿ, ಡಿಸೆಂಬರ್.13 : ಪಟ್ಟಣ ಮತ್ತು ಹೋಬಳಿಯ ಸಾರ್ವಜನಿಕರು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಪಿ. ಮುತ್ತಯ್ಯ ಮನವಿ ಮಾಡಿದ್ದಾರೆ.

Advertisement

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ಪಟ್ಟಣದ ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಅನ್ಯ ಭಾಷೆಗಳಿಂದ ರಾರಾಜಿಸುತ್ತಿವೆ ಆದ್ದರಿಂದ ಕೊಡಲೇ ಪಟ್ಟಣ ಪಂಚಾಯತಿಯ ಅಧಿಕಾರಿಗಳು ತೆರವುಗೊಳಿಸಿ, ಕನ್ನಡ ನಾಮಫಲಕಗಳನ್ನು ಅಳವಡಿಸುವಂತೆ ಅಂಗಡಿ ಮಾಲೀಕರಿಗೆ ತಿಳಿಸಬೇಕು ಮತ್ತು ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಸಿದ ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ. ಶಿವಕುಮಾರ್ ಮಾತನಾಡಿ ನಾಳೆಯಿಂದ ನಮ್ಮ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಪ್ರತಿಕ್ರಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹೋಬಳಿ ಘಟಕ ಅಧ್ಯಕ್ಷ ಪಿ ಮುತ್ತಯ್ಯ ಜಾಗನೂರಹಟ್ಟಿ, ನಗರ ಘಟಕ ಅಧ್ಯಕ್ಷ ಓ ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ವಿಶ್ವನಾಥ್, ನಗರ ಘಟಕ ಉಪಾಧ್ಯಕ್ಷ ಸಿ ಎಸ್ ರಾಘವೇಂದ್ರ, ಹೋಬಳಿ ಘಟಕ ಮಾಜಿ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ ಮಾದಯ್ಯನಹಟ್ಟಿ, ಪ್ರಧಾನ ಕಾರ್ಯದರ್ಶಿ ಕಾಟಯ್ಯ, ಯುವ ಘಟಕ ಅಧ್ಯಕ್ಷ ಸುರೇಶ್, ಹೋಬಳಿ ಘಟಕ ಉಪಾಧ್ಯಕ್ಷರಾದ ಈ. ಮಧು, ಮಂಜುನಾಥ್, ಕಾರ್ಮಿಕ ಘಟಕ ಅಧ್ಯಕ್ಷ ನಾಗರಾಜ್, ಚೌಳಕೆರೆ ಡಿ ಬಿ ಕರಿಬಸಪ್ಪ, ಕೆ ಬಿ ನಗರ ಬೋರಣ್ಣ, ಸೇರಿದಂತೆ ಇದ್ದರು.

Advertisement
Tags :
Advertisement