Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಭದ್ರಾಮೇಲ್ದಂಡೆ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ : ಕರವೇ ಕನ್ನಡ ಸೇನೆ ಕಾರ್ಯಕರ್ತರ ಪ್ರತಿಭಟನೆ

04:37 PM Oct 22, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಶೀಘ್ರವಾಗಿ ಪೂರೈಸಿ ಜಿಲ್ಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಭದ್ರಾ ಮೇಲ್ದಂಡೆ ಯೋಜನೆಯನ್ನು ತಡ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಬರಪೀಡಿತ ಪ್ರದೇಶ ಚಿತ್ರದುರ್ಗ ಜಿಲ್ಲೆಯ ರೈತರು ಮಳೆಯನ್ನೇ ನೆಚ್ಚಿಕೊಂಡಿದ್ದು, ಅತಿ ವೃಷ್ಠಿ ಅನಾವೃಷ್ಠಿ ಎರಡರಿಂದಲೂ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ 2024 ರೊಳಗಾಗಿ ಕಾಮಗಾರಿಯನ್ನು ಮುಗಿಸಿ ನೀರು ಹರಿಸಬೇಕು. ಇಲ್ಲಿಯವರೆಗೂ ಅಧಿಕಾರ ನಡೆಸಿದ ಎಲ್ಲಾ ಪಕ್ಷಗಳು ರೈತರಿಗೆ ಜನಸಾಮಾನ್ಯರಿಗೆ ಪೊಳ್ಳು ಭರವಸೆಯನ್ನು ನೀಡುವುದರಲ್ಲಿಯೇ ಕಾಳ ಕಳೆಯುತ್ತಿವೆ ವಿನಃ ಕಾಮಗಾರಿ ಮಾತ್ರ ಶೂನ್ಯ. ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿರುವುದನ್ನು ಬಿಟ್ಟರೆ ಹಣ ಮಾತ್ರ ಬಿಡುಗಡೆಯಾಗಿಲ್ಲ. ಜಿಲ್ಲೆಯ ಎಲ್ಲಾ ಶಾಸಕರು, ಸಚಿವರು, ಸಂಸದರು ಪಕ್ಷ ಭೇದ ಮರೆತು ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವತ್ತ ಗಮನ ಕೊಡಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಧ್ಯ ಕರ್ನಾಟಕದ ಉಸ್ತುವಾರಿ ರವಿಕುಮಾರ್‍ನಾಯ್ಕ, ರಾಜ್ಯಾಧ್ಯಕ್ಷ ಅರುಣ್‍ಕುಮಾರ್ ಎನ್. ಸಂಘಟನಾ ಕಾರ್ಯದರ್ಶಿ ಅಶೋಕ್, ಮಹಿಳಾ ಅಧ್ಯಕ್ಷೆ ಆಶಾ, ರೈತ ಘಟಕದ ರಾಜ್ಯಾಧ್ಯಕ್ಷ ಸ್ವಾಮಿ ಟಿ. ಅಶ್ವಿನಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಣುಕ ರಾಜಣ್ಣ, ಲಕ್ಷ್ಮಿ, ಗೀತಾಂಜಲಿ

ಸಿ.ಓಬಳೇಶ್‍ಯಾದವ್, ಸಿ.ಸತೀಶ್, ಎನ್.ಓಬಣ್ಣ, ಮುತ್ತಯ್ಯ, ಸೈಯದ್ ಅಲಿ, ಆಶಾ, ಇ.ಎನ್.ಲಕ್ಷ್ಮಿಕಾಂತ, ಏಕಾಂತಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿದ್ದರು.

 

Advertisement
Tags :
activists protestbengaluruchitradurgakarwaya Kannada Senasuddionesuddione newsupper Bhadraಕರವೇ ಕನ್ನಡ ಸೇನೆಕಾರ್ಯಕರ್ತರ ಪ್ರತಿಭಟನೆಚಿತ್ರದುರ್ಗಬೆಂಗಳೂರುಭದ್ರಾಮೇಲ್ದಂಡೆ ಕಾಮಗಾರಿಶೀಘ್ರವೇ ಪೂರ್ಣಗೊಳಿಸಿಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article