Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದೆ : ಪಿ. ರಾಜೀವ್

05:12 PM Apr 22, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ ಏ. 22 : ಸಿಎಂ ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಸರ್ಕಾರ ಒಂದು ಸಮಾಜದ ಒಲೈಕೆಗಾಗಿ ಹಿಂದೂ ವಿರೋಧಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು  ಕುಡುಚಿ ಮಾಜಿ ಶಾಸಕರು ಹಾಗು ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ. ರಾಜೀವ್ ಆರೋಪಿಸಿದರು.

Advertisement

ಚಿತ್ರದುರ್ಗ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ.  ನೇಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಎಂ ಹಾಗೂ ಗೃಹ ಸಚಿವರು ನಿಕೃಷ್ಟವಾದ ಹೇಳಿಕೆ ನೀಡುತ್ತಿದ್ದಾರೆ ಇದು ರಾಜ್ಯದ ದೌರ್ಭಾಗ್ಯ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಚೊಂಬು ಜಾಹೀರಾತು ನೀಡುತ್ತಿದ್ದಾರೆ ಎಂದರು.

 

Advertisement

ರೈತರ ,ದಲಿತರ ಹಾಲು ಉತ್ಪಾದಕರ  ಪ್ರೋತ್ಸಾಹ ಸೇರಿದಂತೆ ಅನೇಕ ಯೋಜನೆಗಳನ್ನು ಕತ್ತರಿಸಿ ಜಬರ ಕೈಗೆ ಚೊಂಬು ಕೊಟ್ಟಿದ್ದು, ಕಾಂಗ್ರೆಸ್ ಎಂದರು. ಬಂಜಾರ ಸಮಾಜವು ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಿಲ್ಲುತ್ತದೆ. ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಎಂದ ಅವರು ಲೋಕಸಭೆ ಚುನಾವಣೆಯಲ್ಲಿ ಒಂದು ಟಿಕೆಟ್ ನೀಡಿಲ್ಲ. ಬಂಜಾರ ಭೋವಿ, ಕೊರಚ ಕೊರಮ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಇದು ಜನರಿಗೆ ಅರ್ಥವಾಗಿದೆ. ಇದೆಲ್ಲ ಬೆಳವಣಿಗೆ ಗಮನಿಸಿದ್ದು, ಕರ್ನಾಟಕದಿಂದ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಬೇಕು ಎಂದು ತೀರ್ಮಾನಿಸಿದೆ. 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. ರಾಜ್ಯವನ್ನು ಶಾಂತಿ ತೋಟವನ್ನಾಗಿ ಮಾಡಲು ಬಿಜೆಪಿ ಸಿದ್ದವಿದ್ದು, ಅದಕ್ಕೆ ಜನರು ಬೆಂಬಲಿ ಗೆಲ್ಲಿಸುತ್ತಾರೆ ಎಂದರು.

ಈ ಸಮಯದಲ್ಲಿ ಹಗರಿಭೋಮ್ಮೇನಹಳ್ಳಿ ಶಾಸಕ ರಾಜೇಶ್ ನೇಮಿಚಂದ್, ಮಾಯಕೊಂಡ ಮಾಜಿ ಶಾಸಕ ಬಸವರಾಜ ನಾಯ್ಕ್,  ಹೂವಿನಹಡಗಲಿ ಶಿರಹಟ್ಟಿ ಶಾಸಕ ಕೃಷ್ಣನಾಯ್ಕ, ಡಾ.ಚಿತ್ರಲಮಾಣಿ, ಶಂಕರ್ ನಾಯ್ಕ್, ಮೃತುಂಜಯ ಬಾದಾಮಿ, ಎಸ್.ಕೆ.ಬೊಳ್ಳುಳ್ಳಿ ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
bengaluruchitradurgaCongress Govtdefense of anti-HinduP. Rajivsuddionesuddione newsಕಾಂಗ್ರೆಸ್ ಸರ್ಕಾರಚಿತ್ರದುರ್ಗಪಿ. ರಾಜೀವ್ಬೆಂಗಳೂರುರಕ್ಷಣೆಗೆ ನಿಂತಿದೆಸುದ್ದಿಒನ್ಸುದ್ದಿಒನ್ ನ್ಯೂಸ್ಹಿಂದೂ ವಿರೋಧಿ
Advertisement
Next Article