For the best experience, open
https://m.suddione.com
on your mobile browser.
Advertisement

ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಿ : ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ ಒತ್ತಾಯ

04:46 PM Oct 21, 2024 IST | suddionenews
ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಿ   ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ ಒತ್ತಾಯ
Advertisement

Advertisement

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ  ಜಮೀರ್ ಅಹಮದ್‍ಖಾನ್‍ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್. ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

Advertisement

ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್‍ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‍ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್‍ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

Advertisement
Tags :
Advertisement