Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಿ : ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ ಒತ್ತಾಯ

04:46 PM Oct 21, 2024 IST | suddionenews
Advertisement

Advertisement

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

Advertisement

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ  ಜಮೀರ್ ಅಹಮದ್‍ಖಾನ್‍ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್. ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್‍ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‍ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್‍ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

Advertisement
Tags :
bengaluruchitradurgademandsdismissMLAMLA Basavanagowda Patil Yatnalsuddionesuddione newsZamir Ahmed Khan Brigadeಒತ್ತಾಯಚಿತ್ರದುರ್ಗಜಮೀರ್ ಅಹಮದ್‍ಖಾನ್ಬೆಂಗಳೂರುಬ್ರಿಗೇಡ್‍ಶಾಸಕಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article