For the best experience, open
https://m.suddione.com
on your mobile browser.
Advertisement

ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಚಿತ್ರದುರ್ಗದಲ್ಲಿ ಜೆಡಿಎಸ್ ಆಗ್ರಹ

03:13 PM May 08, 2024 IST | suddionenews
ಡಿ ಕೆ ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ   ಚಿತ್ರದುರ್ಗದಲ್ಲಿ ಜೆಡಿಎಸ್ ಆಗ್ರಹ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru,

Advertisement

ಸುದ್ದಿಒನ್, ಚಿತ್ರದುರ್ಗ,ಮೇ.08 : ಪೆನ್ ಡ್ರೈವ್ ಹಾಗೂ ಅಶ್ಲೀಲ ವಿಡಿಯೋ ಮೂಲಕ ಹೆಣ್ಣು ಮಕ್ಕಳ ಮಾನ ಹರಾಜು ಹಾಕುತ್ತಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಇಂತಹ ನೀಚ ಕೃತ್ಯಕ್ಕೆ ಮುಂದಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಜಾತ್ಯಾತೀತ ಜನತಾದಳದ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್,ನ ಜಿಲ್ಲಾಧ್ಯಕ್ಷರಾದ ಎಂ.ಜಯ್ಯಣ್ಣ ಮಾತನಾಡಿ ಇತ್ತೀಚೆಗೆ ದಿನಗಳಲ್ಲಿ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಹಗರಣವನ್ನು ಪೆನ್‍ಡ್ರೈವ್ ಹಾಗೂ ಆಶ್ಲೀಲ ವಿಡಿಯೋ ಮೂಲಕ ರಾಜ್ಯದೆಲ್ಲೆಡೆ ಹಂಚುತ್ತಿರುವುದು ಸಂಚಲನವನ್ನು ಸೃಷ್ಟಿಸಿದೆ. ಈ ಲೈಂಗಿಕ ಹಗರಣವನ್ನು ಯಾರೂ ಕೂಡ ಸಮರ್ಥಿಸಿಕೊಳ್ಳಲಾರರು. ಇದು ಸಂಪೂರ್ಣ ವಿಚಾರಣೆಯ ಬಳಿಕ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕೆಂಬುದು ಎಲ್ಲರೂ ಬಯಸುತ್ತಿದ್ದಾರೆ. ಆದರೆ ಈ ಲೈಂಗಿಕ ಹಗರಣದಲ್ಲಿ ಸಂತ್ರಸ್ತೆಯಾಗಿರುವ ಹೆಣ್ಣು ಮಕ್ಕಳನ್ನು ಪೆನ್‍ಡ್ರೈವ್ ಹಾಗೂ ಆಶ್ಲೀಲ ವಿಡಿಯೋ ಮೂಲಕ ಇಡೀ ರಾಜ್ಯಾದ್ಯಂತ ಹಂಚಿರುವುದು ಶಿಕ್ಷಾರ್ಹ ಅಪರಾಧ ಆಗಿರುತ್ತದೆ. ಅಲ್ಲದೆ ಇದರ ರೂವಾರಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂಬುದು ಜಗ್ಗಜನಿತವಾಗಿದೆ. ಆದೂ ಅಲ್ಲದೇ ಇದಕ್ಕೆ ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡ ಅವರು ಎಲ್ಲಾ ವಿಷಯಗಳನ್ನು ಕೂಲಂಕುಷವಾಗಿ ವಿವರಿಸಿದ್ದಾರೆ. ಸರ್ಕಾರದ ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿರುವ ಉಪ ಮುಖ್ಯಮಂತ್ರಿಗಳು ಇಂತಹ ನೀಚ ಕೆಲಸಕ್ಕೆ ಇಳಿದಿರುವುದು ಈಡೀ ರಾಜ್ಯದ ಜನತೆಯ ದುರ್ದೈವವಾಗಿದೆ ಎಂದು ಕಿಡಿಕಾರಿದರು.

ಜೆಡಿಎಸ್‍ನ ಮಾಜಿ ಅಧ್ಯಕ್ಷ ಯಶೋಧರ ಮಾತನಾಡಿ, ತೀವ್ರ ಬರಗಲಾದಿಂದ ತತ್ತರಿಸುತ್ತಿರುವ ರಾಜ್ಯದ ಜನತೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚಿಂತಿಸದೇ ಇಂತಹ ಸ್ವಾರ್ಥ ರಾಜಕೀಯಕ್ಕೆ ಇಳಿದಿರುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ತರುವುದಿಲ್ಲ. ಈ ಚುನಾವಣಾ ಸಂದರ್ಭದಲ್ಲಿ ಜಾತ್ಯಾತೀತ ಜನತಾದಳದ ನಾಯಕ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವರ್ಚಸ್ಸನ್ನು ಕುಂದಿಸಿ, ಜಾತ್ಯಾತೀತ ಜನತಾದಳಕ್ಕೆ ಕಳಂಕ ತರುವುದು ಇದರ ಪ್ರಮುಖ ಉದ್ದೇಶವಾಗಿದೆ. ಅದೂ ಅಲ್ಲದೇ ಮೈತ್ರಿ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ಮುಜುಗರವನ್ನು ಉಂಟು ಮಾಡಿ ಚುನಾವಣೆಯಲ್ಲಿ ಹಿನ್ನಡೆಯನ್ನುಂಟು ಮಾಡುವ ಕೆಟ್ಟ ಆಲೋಚನೆಯೂ ಸಹ ಇದರಲ್ಲಿ ಅಡಗಿದೆ. ಇಷ್ಟೇ ಅಲ್ಲದೆ ಈ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿರುವ ಮಹಿಳೆಯರ ಫೋಟೋಗಳನ್ನು ಯಥಾವತ್ತಾಗಿ ತೋರಿಸಿ ಮಹಿಳೆಯರ ಮಾನ ಮರ್ಯಾದೆಯನ್ನು ತೆಗೆದಿರುತ್ತಾರೆ. ಇದರಿಂದಾಗಿ ಆ ಕುಟುಂಬಗಳ ಪರಿಸ್ಥಿತಿ ಇದೀಗ ಬಹಳ ಶೋಚನೀಯವಾಗಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತೃಆಜ್ ಮಾತನಾಡಿ, ಮಹಿಳೆಯರ ಮಾನ ಮತ್ತು ರಕ್ಷಣೆಗೆ ಕಿಂಚಿತ್ತೂ ಗೌರವ ಕೊಡದೇ ಇಂತಹ ಹೀನ ಕೃತ್ಯವನ್ನು ಎಸಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದು ರಾಜ್ಯದ ಜನತೆಯ ಹಿತದೃಷ್ಟಿಯಿಂದ ಅನಿವಾರ್ಯವಾಗಿದೆ. ಆದ್ದರಿಂದ ಈ ಪೆನ್‍ಡೈವ್ ಸೃಷ್ಟಿಕರ್ತರು ಹಾಗೂ ಅದರ ಹಂಚಿಕೆದಾರರ ವಿರುದ್ಧ ಅವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಈ ನೆಲದ ಕಾನೂನಿನ ಅನುಸಾರವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ತದ ನಂತರ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಮೆರವಣಿಗೆಯನ್ನು ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್.ನ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ಯುವ ಘಟಕದ ಅಧ್ಯಕ್ಷರಾದ ಪ್ರತಾಪ್ ಜೋಗಿ, ಮಂಜುನಾಥ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಜಿ.ಬಿ.ಶೇಖರ್, ಮಠದ ಹಟ್ಟಿ ವೀರಣ್ಣ, ತಾಲ್ಲೂಕು ಘಟಕದ ಅಧ್ಯಕ್ಷರುಗಳಾದ ಸಣ್ಣ ತಿಮ್ಮಪ್ಪ, ಗಣೇಶ್ ಮೂರ್ತಿ, ಹನುಮಂತರಾಯಪ್ಪ, ಪರಮೇಶ್ವರಪ್ಪ, ವಿದ್ಯಾರ್ಥಿಘಟಕದ ಅಧ್ಯಕ್ಷ ಅಪ್ಪು, ನಗರಸಭಾ ಸದಸ್ಯರಾದ ದೀಪು, ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಚಳ್ಳಕೆರೆ ತಾಲ್ಲೂಕು ಕಾರ್ಯಾಧ್ಯಕ್ಷರಾದ ಆನಂದಪ್ಪ, ಶಿವಣ್ಣ, ಕಲಮರಹಳ್ಳಿ ಶಿವಣ್ಣ, ಶಿವಪ್ರಸಾದ್ ಗೌಡ, ಚನ್ನಗಿರಾಮಯ್ಯ, ಹೆಚ್.ನಾಗರಾಜ್, ರಾಜಣ್ಣ, ಚಿದಾನಂದಪ್ಪ, ಮಹಾಲಿಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
Advertisement