Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪೂರ್ಣಿಮಾ ಶ್ರೀನಿವಾಸ್ ದಂಪತಿಗಳಿಂದ ಮೇದಾರ ಕೇತೇಶ್ವರ ಮಠದಲ್ಲಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

06:02 PM Jul 10, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.10 : ಬಡ ಮಕ್ಕಳ ಶಿಕ್ಷಣಕ್ಕೆ ಅವಶ್ಯವಿರುವ ವಸ್ತುಗಳನ್ನು ಹಿಂದಿನಿಂದಲೂ ನೀಡುತ್ತಾ ಬರುತ್ತಿರುವ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಪತಿ ವಿಧಾನಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಇವರುಗಳ ಸೇವೆ ಶ್ಲಾಘನೀಯ ಎಂದು ಬಸವ ಮೇದಾರ ಕೇತೇಶ್ವರ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದರು.

Advertisement

ಸೀಬಾರದ ಸಮೀಪವಿರುವ ಮೇದಾರ ಕೇತೇಶ್ವರ ಮಠದಲ್ಲಿ 8, 9, 10 ನೇ ತರಗತಿಯ 150 ಬಡ ಮಕ್ಕಳಿಗೆ ಉಚಿತ ಸಮವಸ್ತ್ರಗಳ ವಿತರಣೆಯ ಸಾನಿಧ್ಯ ವಹಿಸಿ ಮಾತನಾಡಿದರು.

ಪೂರ್ಣಿಮಾ ಶ್ರೀನಿವಾಸ್‍ರವರು ಶಾಸಕರಾಗಿದ್ದಾಗಲೂ ನಮ್ಮ ಮಠದ ಬಡ ಮಕ್ಕಳ ಶಿಕ್ಷಣಕ್ಕೆ ಏನು ಕೇಳಿದರೂ ಇಲ್ಲವೆನ್ನಲಿಲ್ಲ. ನಮ್ಮ ಮಠದ ಜೊತೆ ಮೊದಲಿನಿಂದಲೂ ವಿನಾಬಾವ ಒಡನಾಟವಿದೆ. ಬಡ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲತ್ತುಗಳನ್ನು ನೀಡುತ್ತಿದೆ. ಇದರ ಜೊತೆಗೆ ಇಂತಹ ದಾನಿಗಳು ಕೈಜೋಡಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಗುಣಗಾನ ಮಾಡಿದರು.

ಹಳ್ಳಿಗಾಡಿನಿಂದ ಬರುವ ಬಡ ಕುಟುಂಬದ ಮಕ್ಕಳು ಬಟ್ಟೆ ಕೊಂಡುಕೊಳ್ಳಲು ಆಗದಂತ ಕಡು ಕಷ್ಟದಲ್ಲಿರುತ್ತಾರೆ. ಇಂತಹ ಮಕ್ಕಳಿಗೆ ಪೂರ್ಣಿಮ ಶ್ರೀನಿವಾಸ್ ದಂಪತಿಗಳು ಸಮವಸ್ತ್ರಗಳನ್ನು ಉದಾರ ಮನಸ್ಸಿನಿಂದ ಕೊಡಿಸಿದ್ದಾರೆ. ಇದೇ ರೀತಿ ಇನ್ನು ಅನೇಕ ಪರೋಪಕಾರದ ಸೇವೆ ಮಾಡುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸ್ವಾಮೀಜಿ ಹಾರೈಸಿದರು.

ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ ಮೇದಾರ ಎನ್ನುವ ಬುಡಕಟ್ಟು ಸಮುದಾಯ ಅತ್ಯಂತ ಕಡು ಬಡತನದಲ್ಲಿದ್ದು, ಶಿಕ್ಷಣದ ಮೂಲಕ ಬದುಕನ್ನು ಹಸನು ಮಾಡಿಕೊಳ್ಳಬೇಕು. ಮಠದ ಸುತ್ತಲು ಒಳ್ಳೆಯ ಪ್ರಶಾಂತ ವಾತಾವರಣವಿದ್ದು, ಮಕ್ಕಳು ಇದರ ಸದುಪಯೋಗಪಡಿಸಿಕೊಂಡು ಶಿಕ್ಷಣವಂತರಾಗುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

ವಿದ್ಯಾರ್ಥಿ ಜೀವನ ಎನ್ನುವುದು ವೈಯಾರ ಪುಂಡಾಟಿಕೆ ಮಾಡುವುದಲ್ಲ. ಶ್ರದ್ದೆ ವಹಿಸಿ ಕಠಿಣ ಪರಿಶ್ರಮದಿಂದ ಶಿಕ್ಷಣ ಕಲಿತಾಗ ಜೀವನದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಲು ಸಾಧ್ಯ. ಬುದ್ದ, ಬಸವ, ಅಂಬೇಡ್ಕರ್‍ರವರ ಆಶಯದಂತೆ ನೀವುಗಳು ವಿದ್ಯಾವಂತರಾಗಬೇಕು ಎಂದರು.

ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಪೊಲೀಸ್ ವೃತ್ತ ನಿರೀಕ್ಷಕ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ವೇಮನರೆಡ್ಡಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Tags :
bengaluruchildrenchitradurgaDistribution of free uniformsMedara Keteshwar MathPoornima srinivassuddionesuddione newsಉಚಿತ ಸಮವಸ್ತ್ರ ವಿತರಣೆಚಿತ್ರದುರ್ಗದಂಪತಿಪೂರ್ಣಿಮಾ ಶ್ರೀನಿವಾಸ್ಬೆಂಗಳೂರುಮೇದಾರ ಕೇತೇಶ್ವರ ಮಠಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article