Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಪರಿಸರ ರಕ್ಷಣೆ ನಿತ್ಯದ ಕಾಯಕವಾಗಬೇಕು : ಉಮೇಶ ಕಾರಜೋಳ

02:46 PM Jul 03, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜುಲೈ 03 : ನಿಸರ್ಗ ಸಹ ತಾಯಿ ಸ್ವರೂಪಿ. ಹೀಗಾಗಿ ಪರಿಸರ ರಕ್ಷಣೆ ಆದ್ಯ ಕರ್ತವ್ಯ, ನಿತ್ಯದ ಕಾಯಕವಾಗಬೇಕು ಎಂದು ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಕಾರ್ಯದರ್ಶಿ ಉಮೇಶ ಕಾರಜೋಳ ತಿಳಿಸಿದರು.

Advertisement

ಪ್ರಧಾನಿ ನರೇಂದ್ರ ಮೋದಿಯವರ ಆಕಾಶವಾಣಿಯಲ್ಲಿ ಪ್ರಸಾರವಾಗುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪರಿಸರ ಕಾಳಜಿ ಕುರಿತು ಹೇಳಿದ ಅಮ್ಮನ ಹೆಸರಿನಲ್ಲಿ ಗಿಡ ನೆಡುವ ಅಭಿಯಾನಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ವಾರ್ಡ್ ನಂ. 31 ರ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್ ಕಾಲೋನಿ ಕ್ಷೇಮಾಬಿವೃದ್ಧಿ ಸಂಘದವತಿಯಿಂದ ಸಸಿಗಳನ್ನು ನೆಡುವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹೆತ್ತ ತಾಯಿ ಋಣ ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ, ಹೆತ್ತ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಮೂಲಕ ನಮಗೆ ಉಸಿರು ನೀಡಿರುವ ಪರಿಸರ ರಕ್ಷಿಸುವ ಪವಿತ್ರ ಕಾಯಕ ಕೈಗೊಳ್ಳುವಂತೆ ಪ್ರಧಾನಿ ಮೋದಿಜಿ ಕರೆ ನೀಡಿದ್ದಾರೆ. ನಿಸರ್ಗ ಸಹ ತಾಯಿ ಸ್ವರೂಪಿ. ಹೀಗಾಗಿ ಪರಿಸರ ರಕ್ಷಣೆ ಆದ್ಯ ಕರ್ತವ್ಯ, ನಿತ್ಯದ ಕಾಯಕವಾಗಬೇಕು ಎಂದರು.

ಕೇವಲ ಸಸಿ ನೆಟ್ಟರೆ ಸಾಲದು, ಅವುಗಳನ್ನು ಪೋಷಿಸುವುದು ಅಷ್ಟೇ ಮುಖ್ಯ, ಮಾನವನ ಪರಿಸರ ವಿರೋಧಿ ಚಟುವಟಿಕೆಗಳಿಂದ ಪರಿಸರ ಹಾನಿಯಾಗುತ್ತಿದೆ, ಇದರಿಂದ ನಿರಫರಾಧಿ ಉಳಿದ ಜೀವಿಗಳಿಗೂ ತೊಂದರೆಯಾಗುತ್ತಿದೆ. ಸಸಿ ನೆಡುವುದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಗಿಡಗಳಿಗೆ ನೀರುಣಿಸುವುದು, ಎಲೆಗಳಿಗೆ ರೋಗ ತಾಕಿದೆಯೇ ಎಂದು ಪರೀಕ್ಷಿಸುವುದು, ಇತರರಿಗೂ ಸಸಿ ನೆಡಿ ಎಂದು ಹೇಳುವುದು ಸಹ ಪರಿಸರ ರಕ್ಷಣೆ ಭಾಗವೇ ಎಂದರು.

ಈ ಸಂದರ್ಭದಲ್ಲಿ ಡಾ.ರವಿಪ್ರಕಾಶ್ ರೆಡ್ಡಿ, ರಮೇಶ್, ಪಾಂಡುರಂಗ ರೆಡ್ಡಿ, ಬಿ. ಎಂ ಪಾಲಯ್ಯ, ತಿಮ್ಮೇಶ. ಆದರ್ಶ. ತಿರುಮಲಕ್ಷಿ,  ಅನಿತಾ, ಸುಧಾ, ಸುಮಿತ್ರಮ್ಮ ಹಾಗೂ ಕಾಲೋನಿಯ ನಿವಾಸಿಗಳು ಪಾಲ್ಗೊಂಡಿದ್ದರು.

Advertisement
Tags :
bengaluruchitradurgaEnvironmentalprotectionroutinesuddionesuddione newsUmesh Karajolaಉಮೇಶ ಕಾರಜೋಳಕಾಯಕಚಿತ್ರದುರ್ಗಪರಿಸರಬೆಂಗಳೂರುರಕ್ಷಣೆಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article