Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಫೆಬ್ರವರಿ 2 ಮತ್ತು 3 ರಂದು ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ :  ಆಹ್ವಾನ ಪತ್ರಿಕೆ ಬಿಡುಗಡೆ

05:54 PM Jan 26, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಜನವರಿ.26 : ಸಾಣೇಹಳ್ಳೀಯಲ್ಲಿ ಫೆ.2 ಮತ್ತು 3 ರಂದು ಜರುಗಲಿರುವ ಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಲಾಯಿತು.

Advertisement

ಉಸ್ತುವಾರಿ ಸಚಿವ ಡಿ.ಸುಧಾಕರ್ ಮತ್ತು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಕುಮಾರ್ (ಪಪ್ಪಿ) 16 ಪುಟಗಳ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಕಸಾಪ ಅಧ್ಯಕ್ಷರಾದ ಕೆ.ಎಂ.ಶಿವಸ್ವಾಮಿ, ಸೂರಿ ಶ್ರೀನಿವಾಸ್, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎ.ಸಿ.ಚಂದ್ರಣ್ಣ, ಕೋಶಾಧ್ಯಕ್ಷ ಆರ್.ಮಲ್ಲಿಕಾರ್ಜುನಯ್ಯ, ಹೊಳಲ್ಕೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಎನ್. ಶಿವಮೂರ್ತಿ, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ವಿ.ಶ್ರೀನಿವಾಸ ಮಳಲಿ, ಕೆ.ಪಿ.ಎಂ.ಗಣೇಶಯ್ಯ, ಖಜಾಂಚಿ ಚೌಳೂರು ಲೋಕೇಶ, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ ಮತ್ತಿತರರಿದ್ದರು.

Advertisement

Advertisement
Tags :
chitradurgaFirst Inter-District Kannada Sahitya SammelnaInvitation letter releasedsuddioneಆಹ್ವಾನ ಪತ್ರಿಕೆಚಿತ್ರದುರ್ಗಪ್ರಥಮ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಬಿಡುಗಡೆಸುದ್ದಿಒನ್
Advertisement
Next Article