Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರಿಗೆ ಶುಭಕೋರಿದ ಗೆಳೆಯರು

04:02 PM Mar 05, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05 : ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ರವರಿಗೆ ನಗರಸಭೆ ಮಾಜಿ ಅಧ್ಯಕ್ಷ ಮಂಜುನಾಥ್ ಗೊಪ್ಪೆ ಹಾಗೂ ಅವರ ಬಳಗದ ವತಿಯಿಂದ ಸನ್ಮಾನಿಸಲಾಯಿತು.

Advertisement

ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯಲ್ಲಿ ಎಂ.ಕೆ.ತಾಜ್‍ಪೀರ್‍ರವರಿಗೆ ಮೈಸೂರು ಪೇಟ, ಬೃಹದಾಕಾರದ ಹಾರ, ಶಾಲು ಹಾಕಿ ಸನ್ಮಾನಿಸಿ ಮಾತನಾಡಿದ ಮಂಜುನಾಥಗೊಪ್ಪೆ ನಿಮ್ಮ ಅಧಿಕಾರವಧಿಯಲ್ಲಿ ಚಿತ್ರದುರ್ಗ ಅಭಿವೃದ್ದಿಯತ್ತ ಸಾಗಲಿ ಎಂದು ಹಾರೈಸಿದರು.

ಹೆಚ್.ಶಬ್ಬೀರ್‍ಭಾಷ, ಗುಡ್‍ಲಕ್ ಇಮ್ತಿಯಾಜ್, ದಾದುಪಾಟೀಲ್, ಬಾಸಿತ್, ಕಬುಲಾ ಹುಸೇನ್, ಇಮ್ತಿಯಾಜ್, ಮೆಹಬೂಬ್‍ಪಾಷ, ಮಹಮದ್ ಫಯಾಜ್, ಈಶ್ವರಪ್ಪ, ಅರುಣ್‍ಕುಮಾರ್, ಅಶ್ರಫ್, ಮಹಮದ್ ಜಿಕ್ರಿಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಎಂ.ಕೆ.ತಾಜ್‍ಪೀರ್‍ರವರಿಗೆ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ ಹಾಗೂ ಉಪಾಧ್ಯಕ್ಷ ಎಲ್.ಬಿ.ರಾಜಪ್ಪ ಇವರುಗಳು ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದರು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ.ಕೆ.ತಾಜ್‍ಪೀರ್‍ರವರಿಗೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ವತಿಯಿಂದ ಪ್ರಾಧಿಕಾರದ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಭೂತೇಶ್, ನಗರಾಧ್ಯಕ್ಷೆ ಹರ್ಷಿದಾಭಾನು, ತುಳಸಿ, ಕೊಲ್ಲಮ್ಮ, ಸಾರಂಭಿ, ಸರ್ದಾರ್, ಸೇವಾದಳದ ಉಪಾಧ್ಯಕ್ಷ ಮನ್ಸೂರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ನೇರ್ಲಗುಂಟೆ ರಾಮಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.

 

Advertisement
Tags :
bengaluruChairmanchitradurgaChitradurga Urban Development Authoritysuddionesuddione newsಅಧ್ಯಕ್ಷರುಗೆಳೆಯರುಚಿತ್ರದುರ್ಗಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರತಾಜ್ ಪೀರ್ತಾಜ್ಪೀರ್ನೂತನಬೆಂಗಳೂರುಶುಭಕೋರಿದಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article