For the best experience, open
https://m.suddione.com
on your mobile browser.
Advertisement

ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿ : ಜಯಣ್ಣ

02:22 PM Aug 22, 2024 IST | suddionenews
ಹೆಚ್  ಡಿ  ಕುಮಾರಸ್ವಾಮಿ ರಾಜೀನಾಮೆ ನೀಡಲಿ   ಜಯಣ್ಣ
Advertisement

ಚಿತ್ರದುರ್ಗ : ಮುಡಾ ಹಗರಣದಲ್ಲಿ ಯಾವುದೆ ಪಾತ್ರವಿಲ್ಲದ ನಿಷ್ಕಳಂಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಿನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನವರು ತಮ್ಮ ಪಕ್ಷಗಳು ಅಧಿಕಾರದಲ್ಲಿದ್ದಾಗ ನಡೆದಿರುವ ಹಗರಣಗಳನ್ನು ಏಕೆ ಮುಚ್ಚಿಟ್ಟುಕೊಳ್ಳುತ್ತಿವೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಸೆಲ್ ವಿಭಾಗದ ಅಧ್ಯಕ್ಷ ಜಯಣ್ಣ ಪ್ರಶ್ನಿಸಿದ್ದಾರೆ ?

Advertisement
Advertisement

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿ ಹಗರಣ ಎಸಗಿದ್ದನ್ನು ಮರೆತಂತಿದೆ. ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವಂತೆ ಹೆಚ್.ಡಿ.ಕುಮಾರಸ್ವಾಮಿ ಹಗರಣದ ತನಿಖೆಗೂ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಡಬೇಕು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ಸಿಲುಕಿಸಲು ಬಿಜೆಪಿ.ಜೆಡಿಎಸ್. ನಾಯಕರು ಯಾವ ನೈತಿಕತೆಯಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಿದರು. ಕೂಡಲೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಜಯಣ್ಣ ಒತ್ತಾಯಿಸಿದ್ದಾರೆ.

Advertisement
Tags :
Advertisement