For the best experience, open
https://m.suddione.com
on your mobile browser.
Advertisement

ಹಿರಿಯೂರು | ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ, ಚಾಲಕ ಸಾವು : ತಪ್ಪಿದ ಬಾರೀ ಅನಾಹುತ

02:35 PM Nov 26, 2023 IST | suddionenews
ಹಿರಿಯೂರು   ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ  ಚಾಲಕ ಸಾವು   ತಪ್ಪಿದ ಬಾರೀ ಅನಾಹುತ
Advertisement

ಸುದ್ದಿಒನ್, ಹಿರಿಯೂರು, ನವೆಂಬರ್.26 :ಖಾಸಗಿ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.

Advertisement
Advertisement

ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ.

Advertisement

ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಇದರಿಂದ ಬಾರೀ ಅನಾಹುತ ತಪ್ಪಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Advertisement