Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು | ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ, ಚಾಲಕ ಸಾವು : ತಪ್ಪಿದ ಬಾರೀ ಅನಾಹುತ

02:35 PM Nov 26, 2023 IST | suddionenews
Advertisement

ಸುದ್ದಿಒನ್, ಹಿರಿಯೂರು, ನವೆಂಬರ್.26 :ಖಾಸಗಿ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದಲ್ಲಿ ಸಂಭವಿಸಿದೆ.

Advertisement

ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ.

ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಕೆಲವು ವಸ್ತುಗಳು ಹಾಳಾಗಿವೆ. ಇದರಿಂದ ಬಾರೀ ಅನಾಹುತ ತಪ್ಪಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
bus accidentdriver diesdriving the busHeart attackhiriyurಚಾಲಕ ಸಾವುತಪ್ಪಿದ ಬಾರೀ ಅನಾಹುತಬಸ್ಹಿರಿಯೂರುಹೃದಯಾಘಾತ
Advertisement
Next Article