For the best experience, open
https://m.suddione.com
on your mobile browser.
Advertisement

ಹಿರಿಯೂರು | ವಿವಿಧೆಡೆ ಅಪಘಾತ, ಮೂವರ ಸಾವು

02:18 PM May 28, 2024 IST | suddionenews
ಹಿರಿಯೂರು   ವಿವಿಧೆಡೆ ಅಪಘಾತ  ಮೂವರ ಸಾವು
Advertisement

ಸುದ್ದಿಒನ್, ಹಿರಿಯೂರು, ಮೇ. 29 : ತಾಲೂಕಿನ ವಿವಿಧೆಡೆ ನಡೆದ ರಸ್ತೆ ಅಪಘಾತದಲ್ಲಿ  ಮೂವರು ಸಾವನ್ನಪ್ಪಿದ್ದಾರೆ.

Advertisement

ಯರಬಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ತುಮಕೂರು ಮೂಲದ ನಾಗರಾಜ್ ಶೆಟ್ಟಿ (55) ಹಾಗೂ ವಿಶಾಲಾಕ್ಷಮ್ಮ (75), ಎಂದು ಗುರುತಿಸಲಾಗಿದೆ.

Advertisement

ಮೃತ ನಾಗರಾಜ್ ಶೆಟ್ಟಿ ಮಗಳನ್ನ ಶಾಲೆಗೆ ಬಿಟ್ಟು ಬರಲು ತುಮಕೂರಿಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗಳು ಬಿಂದು, ಪತ್ನಿ ಭಾಗ್ಯಲಕ್ಷ್ಮಿ, ಸಂಬಂಧಿ ಗೀತಾಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಗೊಂಡವರನ್ನು ಹಿರಿಯೂರಿನ ಸಾರ್ಕರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಅಪರಿಚಿತ ವ್ಯಕ್ತಿ ಸಾವು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ಆದಿವಾಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

Advertisement
Advertisement

ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತನ ದೇಹ ನಜ್ಜುಗುಜ್ಜಾಗಿದ್ದು, ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Tags :
Advertisement