Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರು ಬಳಿ ಭೀಕರ ಅಪಘಾತ : ಓರ್ವ ಸಾವು

06:39 PM Oct 03, 2024 IST | suddionenews
Advertisement

ಸುದ್ದಿಒನ್, ಹಿರಿಯೂರು, ಅಕ್ಟೋಬರ್‌, 03 : ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಡೆದಿದೆ.

Advertisement

ಬೆಂಗಳೂರು ಕಡೆಯಿಂದ ದಾವಣಗೆರೆ ಕಡೆಗೆ ಹೋಗುತ್ತಿದ್ದ ಕಾರು ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಶಾಲಾ ಶಿಕ್ಷಕರ ಸಂಘದ
ಅಧ್ಯಕ್ಷ ಚಂದ್ರಶೇಖರ್ (45) ಎಂದು ಗುರುತಿಸಲಾಗಿದೆ. ದಾವಣಗೆರೆಯ ಮೆಡಿಕಲ್ ಕಾಲೇಜಿನಲ್ಲಿ ಮಗನಿಗೆ ಸೀಟ್ ಸಿಕ್ಕಿದ್ದರಿಂದ ಅವರನ್ನು ಕಾಲೇಜಿಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೇ ಈ ಘಟನೆ ಸಂಭವಿಸಿದೆ. ಇನ್ನೂ ಕಾರಿನಲ್ಲಿದ್ದ ಪತ್ನಿ ಹಾಗೂ ಮಗನಿಗೆ ಪೆಟ್ಟಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement
Tags :
bengaluruchitradurgahiriyurHorrible accidentone deadsuddionesuddione newsಓರ್ವ ಸಾವುಚಿತ್ರದುರ್ಗಬೆಂಗಳೂರುಭೀಕರ ಅಪಘಾತಸುದ್ದಿಒನ್ಸುದ್ದಿಒನ್ ನ್ಯೂಸ್ಹಿರಿಯೂರು
Advertisement
Next Article