Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಚಿತ್ರದುರ್ಗದಲ್ಲಿ ಭೀಕರ ಕೊಲೆ :  ಪತ್ನಿ ಕತ್ತು ಕೊಯ್ದು ಪತಿ ಪರಾರಿ

04:32 PM Jan 12, 2024 IST | suddionenews
Advertisement

 

Advertisement

ಸುದ್ದಿಒನ್, ಚಿತ್ರದುರ್ಗ, ಜ.12. : ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಹೆಂಡತಿಯ ಕತ್ತು ಕೊಯ್ದು ಬರ್ಬರವಾಗಿ‌ ಹತ್ಯೆ ಮಾಡಿರುವ ಘಟನೆ ನಗರದ ನೆಹರು ನಗರ ಬಡಾವಣೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ರೇಣುಕಾ(40) ಮೃತ ದುರ್ದೈವಿಯಾಗಿದ್ದು, ಅವರ ಪತಿ ಕೊಲೆ ಮಾಡಿರುವ ಆರೋಪಿ ಮಂಜುನಾಥ್ ತಲೆ ಮರೆಸಿಕೊಂಡಿದ್ದಾನೆ. ಪತ್ನಿಯ ಶೀಲ ಶಂಕಿಸಿ ಪತಿ ಮಂಜುನಾಥ ಮನೆಯಲ್ಲಿ ಪದೇಪದೇ ಗಲಾಟೆ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಗುರುವಾರ ಕೊಲೆ ಮಾಡಿ ಮನೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

Advertisement

ರೇಣುಕಾ ಅವರ ತಾಯಿ ಪದೇಪದೇ ಫೋನ್ ಮಾಡಿದರೂ ಸ್ವೀಕರಿಸಿರಲಿಲ್ಲ. ಅದ್ದರಿಂದ ಅನುಮಾನ ಬಂದ ತಾಯಿ ಮನೆ ಬಾಗಿಲು ತೆಗೆದು ನೋಡಿದಾಗ ಪುತ್ರಿ ರೇಣುಕಾ ರಕ್ತದ ಮರಡುವಿನಲ್ಲಿ ಬಿದ್ದದ್ದನ್ನು ಕಂಡು ಗಾಬರಿಯಾಗಿ ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದು, ಆರೋಪಿ ಮಂಜುನಾಥ್ ಗಾಗಿ ಹುಡುಕಾಟ ನಡೆಸಿದ್ದಾರೆ. ಈ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Tags :
chitradurgaHorrible murderruns awaystrangles husbandwifeಚಿತ್ರದುರ್ಗಪತಿ ಪರಾರಿಪತ್ನಿ ಕತ್ತು ಕೊಯ್ದುಭೀಕರ ಕೊಲೆ
Advertisement
Next Article