Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

01:56 PM Apr 27, 2024 IST | suddionenews
Advertisement

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದರು.

Advertisement

 

ಲೋಕಸಭೆ ಚುನಾವಣೆಯ ಮತದಾನ ಮುಗಿದ ಮರುದಿನ ಶನಿವಾರ ಚಾಲುಕ್ಯ ಹೋಟೆಲ್‍ನಲ್ಲಿ ಚಹ ಸೇವಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆಯ ಆರು ವಿಧಾನಸಭೆ ಹಾಗೂ ಶಿರಾ ಪಾವಗಡ ಸೇರಿದಂತೆ ಮೂರು ಸಾವಿರದ ಹಳ್ಳಿಗಳಿಗೆ ಸುತ್ತಾಡಿ ಮತಯಾಚಿಸಲು ಸಮಯ ಸಾಕಾಗಲಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕಡೆ ಮತದಾರರನ್ನು ಭೇಟಿ ಮಾಡಿ ಮತ ಕೇಳಿದ್ದೇನೆ. ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಟ್ಟರೆ ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆಂದು ಹೇಳಿದರು.

Advertisement

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿರುವ ಜನ ದೇಶ ಸುಭದ್ರವಾಗಿರಬೇಕಾದರೆ ಯಾರ ಕೈಗೆ ಅಧಿಕಾರ ಕೊಡಬೇಕು. ಯಾರು ಈ ದೇಶದ ಪ್ರಧಾನಿಯಾಗಬೇಕೆಂಬ ಜಾಗೃತಿ ಕ್ಷೇತ್ರದ ಮತದಾರರಲ್ಲಿ ಮೂಡಿರುವುದು ಅತ್ಯಂತ ಸಂತೋಷದ ಸಂಗತಿ. ಈ ನಿಟ್ಟಿನಲ್ಲಿ ಜನ ಯೋಚಿಸಿ ಮತದಾನ ಮಾಡಿದ್ದಾರೆಂಬ ನಂಬಿಕೆಯಿದೆ. ಚುನಾವಣೆಯಲ್ಲಿ ಮಾತ್ರ ಪಕ್ಷದಿಂದ ಸ್ಪರ್ಧಿಸಿ ರಾಜಕೀಯ ಮಾಡುವುದು ಅನಿವಾರ್ಯ ಮತದಾನ ಮುಗಿದ ನಂತರ ನಾನು ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರ ಜನಪ್ರತಿನಿಧಿ. ಯಾವುದೇ ತಾರತಮ್ಯವಿಲ್ಲದೆ ನಿಸ್ಪಕ್ಷಪಾತವಾಗಿ ಎಲ್ಲರ ಸೇವೆ ಮಾಡಲು ಸಿದ್ದ ಎಂದು ತಿಳಿಸಿದರು.

ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Tags :
2024 Lok Sabha electionbengaluruchitradurgagovind karjolsuddionesuddione newsಖುಷಿಗೋವಿಂದ ಕಾರಜೋಳುಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article