For the best experience, open
https://m.suddione.com
on your mobile browser.
Advertisement

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್ ವಿರುದ್ಧ ಅಭಿಯಾನ : ಮೀಸಲಾತಿ ಜಾಗೃತಿ ಸಮಿತಿ ಎಚ್ಚರಿಕೆ

03:18 PM Nov 27, 2023 IST | suddionenews
ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಕಾಂಗ್ರೆಸ್ ವಿರುದ್ಧ ಅಭಿಯಾನ   ಮೀಸಲಾತಿ ಜಾಗೃತಿ ಸಮಿತಿ ಎಚ್ಚರಿಕೆ
Advertisement

Advertisement
Advertisement

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

Advertisement

ಸುದ್ದಿಒನ್, ಚಿತ್ರದುರ್ಗ ನ. 27 : ಈ ಬಾರಿಯ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ ಚರ್ಚೆ ಮಾಡಿ ಅದರ ಬಗ್ಗೆ ಸೂಕ್ತವಾದ ಕ್ರಮ ಜರುಗಿಸಬೇಕು, ಒಳಮೀಸಲಾತಿಯ ಕುರಿತು ಸಕಾರಾತ್ಮಕವಾದಂತ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಇಡೀ ಕರ್ನಾಟಕ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನವನ್ನು ಶುರು ಮಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಳಿಸಲಾಗುವುದು ಎಂದು ಸರ್ಕಾರಕ್ಕೆ ಮೀಸಲಾತಿ ಜಾಗೃತಿ ಸಮಿತಿ ಎಚ್ಚರಿಕೆಯನ್ನು ನೀಡಿದೆ.

Advertisement
Advertisement

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಹೈಕೋರ್ಟ್ ನ್ಯಾಯವಾದಿಗಳು, ಬಿಎಸ್.ಪಿ.ಯ ರಾಜ್ಯಾಧ್ಯಕ್ಷರಾದ ಎ.ಹರಿರಾಮ್ ಕಳೆದ ಮೂರು ದಶಕಗಳಿಂದ ಕರ್ನಾಟಕ ರಾಜ್ಯದಲ್ಲಿ ಒಳ ಮೀಸಲಾತಿಯ ಕುರಿತು ದೊಡ್ಡ ಚಳುವಳಿ ಮತ್ತು ಹೋರಾಟಗಳು ನಡೆದಿದೆ.  ಈ ಹೋರಾಟದ ಪ್ರತಿಫಲವಾಗಿ ಕರ್ನಾಟಕ ರಾಜ್ಯದಲ್ಲಿ 2005ರಲ್ಲಿ ಸರ್ಕಾರವು ಸದಾಶಿವ ಆಯೋಗವನ್ನು ರಚಿಸಿತು. ಆಯೋಗವು ಇಡೀ ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಸಂಚರಿಸಿ, ರಾಜ್ಯದ ವಿವಿದ ಸಂಘಟನೆಗಳ ನಾಯಕರೊಂದಿಗೆ ಚರ್ಚಿಸಿ, ಮನೆ ಮನೆಗೂ ಬೇಟಿ ನೀಡಿ, ಮಾಹಿತಿಗಳನ್ನು ಸಂಗ್ರಹಿಸಿ, 101 ಜಾತಿಗಳನ್ನು ಅಧ್ಯಯನ ಮಾಡಿ ಅವರ ಸಾಮಾಜಿಕ ಶೈಕ್ಷಣಿಕ ಅರ್ಥಿಕ ಮತ್ತು ರಾಜಕೀಯ ಸ್ಥಾನಮಾನಗಳನ್ನು ವರದಿಯಲ್ಲಿ ಅಳವಡಿಸಿ, ಕೂಲಂಕುಶ ಅಧ್ಯಯನದ ನಂತರ ರಾಜ್ಯ ಸರ್ಕಾರಕ್ಕೆ ತನ್ನ ವರದಿಯನ್ನು ಒಪ್ಪಿಸಿದೆ.

ಆದರೆ ತದನಂತರ ಆ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸುವುದಾಗಲಿ ಚರ್ಚಿಸುವುದಾಗಲಿ ಅಥವಾ ಅದನ್ನು ಜಾರಿ ಮಾಡುವ ಬಗ್ಗೆ ಆಗಲಿ ಯಾವುದೇ ಸರ್ಕಾರ ತೀರ್ಮಾನಗಳನ್ನು ತೆಗೆದುಕೊಳ್ಳಲಿಲ್ಲ. ಇದರಿಂದ ಮತ್ತೆ ರಾಜ್ಯಾದ್ಯಂತ ಒಳಮಿಸಲಾತಿಯ ಪರ ಹೋರಾಟಗಳು ತೀವ್ರಗೊಳ್ಳುತ್ತಿದ್ದಂತೆ, ತಮ್ಮ ನಾಲ್ಕು ವರ್ಷಗಳ ಅಧಿಕಾರದ ಅವಧಿಯಲ್ಲಿ ಸುಮ್ಮನಿದ್ದ ಬಿಜೆಪಿ ಸರ್ಕಾರವು ದಲಿತರ ಕಣ್ಣೂರೆಸಲು ಚುನಾವಣೆಯ ಸಂದರ್ಭದಲ್ಲಿ ನಾವು ಕೇಂದ್ರ ಸರ್ಕಾರಕ್ಕೆ ಒಳಮಿಸಲಾತಿಯ ವರದಿಯನ್ನು ಶಿಫಾರಸ್ಸು ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿ ಇನ್ನೇನು ಒಳಮಿಸಲಾತಿ ಜಾರಿಯಾಗಿಯೇ ಬಿಟ್ಟಿತು ಅನ್ನುವಂತ ಗುಮಾನಿಯನ್ನ ಸೃಷ್ಟಿಸಿ ಇಡೀ ದಲಿತ ಸಮುದಾಯಕ್ಕೆ ಮೋಸ ಮಾಡಿತು ಎಂದು ಆರೋಪಿಸಿದರು.

ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಸಿಟಿ ಆರ್ ಭಾಸ್ಕರ್ ಪ್ರಸಾದ್ ಮಾತನಾಡಿ,  ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೂ ತನ್ನ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂಬ ಭರವಸೆಯನ್ನು ನೀಡಿ ದಲಿತರ ಮತಗಳನ್ನು ಪಡೆಯುವ ಹುನ್ನಾರ ಮಾಡಿ ಅದರಲ್ಲಿ ಯಶಸ್ವಿಯೂ ಆಯಿತು, ಆದರೆ, ತದನಂತರ ಒಳಮಿಸಲಾತಿಯ ಬಗ್ಗೆ ಯಾವುದೇ ಮತಾಗಲಿ, ಅಥವಾ ತೀರ್ಮಾನವಾಗಲಿ ತೆಗೆದುಕೊಳ್ಳಲಿಲ್ಲ, ಎಲ್ಲಾ ರಾಜಕೀಯ ಪಕ್ಷಗಳು ಒಳ ಮೀಸಲಾತಿಯನ್ನು ವಿಷಯವನ್ನು ಕೇವಲ ಚುನಾವಣೆಯ ಸರಕನ್ನಾಗಿ ಬಳಸಿಕೊಂಡು ನಿರಂತರವಾಗಿ ದಲಿತರನ್ನು ಮೋಸ ಮಾಡುತ್ತಿವೆ ಎಂದರು.

ಈ ಬಾರಿಯ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ, ಚರ್ಚೆ ಮಾಡಿ ಅದರ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಒಳಮೀಸಲಾತಿಯ ಕುರಿತು ಸಕಾರಾತ್ಮಕವಾದಂತ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಇಡೀ ಕರ್ನಾಟಕ ರಾಜ್ಯಾದ್ಯಂತ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನವನ್ನು ಶುರು ಮಾಡಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾರವನ್ನು ಕಳಿಸಲಾಗುವುದು ಹಾಗಾಗಿ ಮುಖ್ಯಮಂತ್ರಿಗಳು ಅವರು ಕೊಟ್ಟ ಮಾತಿನಂತೆ ಒಳ ಮೀಸಲಾತಿಯ ಕುರಿತು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

ಗೋಷ್ಠಿಯಲ್ಲಿ ಶ್ರೀನಿವಾಸ್, ಸೇರಿದಂತೆ ಇತರರು ಭಾಗವಹಿಸಿದ್ದರು.

Advertisement
Tags :
Advertisement