Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಹಿರಿಯೂರಿನಲ್ಲಿ ಅಕ್ರಮ ಪಡಿತರ ಸಾಗಾಟ :  ಅಕ್ಕಿ ಗೋಧಿ ವಶ, ಪ್ರಕರಣ ದಾಖಲು

05:12 PM Dec 20, 2023 IST | suddionenews
Advertisement

 

Advertisement

ಸುದ್ದಿಒನ್, ಹಿರಿಯೂರು, ಡಿಸೆಂಬರ್.20 : ತಾಲ್ಲೂಕಿನ 103 ಗೇಟ್ ಬಳಿ ಈಚರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಆಹಾರ ಸರಬರಾಜು ಶಿರಸ್ತೇದಾರ್ ಮತ್ತು ಇನ್ನಿತರ ಅಧಿಕಾರಿಗಳು ದಾಳಿ ನಡೆಸಿ, ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಕುಷ್ಟಗಿ ತಾಲೂಕಿನ ಎಂ. ಗೂಡದೂರು ಗ್ರಾಮದ 32 ವರ್ಷದ ಶಿವಪುತ್ರ ಎಂಬ ಲಾರಿ ಚಾಲಕ ತನ್ನ  ಈಚರ್ ಲಾರಿಯಲ್ಲಿ 30ರಿಂದ 40 ಚೀಲಗಳಲ್ಲಿ ಅಕ್ಕಿ ಮತ್ತು ಗೋಧಿ ತುಂಬಿಕೊಂಡು ಬೇರೆಡೆಗೆ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಅನ್ನಭಾಗ್ಯ ಯೋಜನೆಯ ಅಕ್ಕಿ ಹಾಗೂ ಗೋಧಿಯಂತೆ ಕಂಡು ಬಂದ ಹಿನ್ನೆಲೆಯಲ್ಲಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಗೌಡ ಸೇರಿದಂತೆ ಮತ್ತಿತರರು ಇದ್ದರು.

Advertisement
Tags :
case registeredchitradurgaillegalrationriceseizedsuddionetransportationwheatಅಕ್ಕಿ ಗೋಧಿಅಕ್ರಮ ಪಡಿತರಎಫ್.ಐ.ಆರ್ ದಾಖಲುಚಿತ್ರದುರ್ಗಪ್ರಕರಣವಶಸಾಗಾಟಸುದ್ದಿಒನ್ಹಿರಿಯೂರು
Advertisement
Next Article