Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

09:49 PM May 21, 2024 IST | suddionenews
Advertisement

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಭಂಧಿಗಳು ತಮ್ಮ ಜಬಾಬ್ದಾರಿಯರಿತು ಪ್ರಜ್ಞಾಪೂರ್ವಕವಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಖಡಕ್ ಸೂಚನೆ ನೀಡಿದರು.

Advertisement

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಎಲ್ಲಾ ತಾಲೂಕುಗಳ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ ಎಣಕೆ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ಚುನಾವಣಾ ಕಾರ್ಯನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಎಲ್ಲಾ ತಾಲೂಕುಗಳ ತಹಶೀಲ್ದಾರರು ತಮ್ಮ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳ ಮತಎಣಿಕೆ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂಧಿಗಳನ್ನು ಮಾತ್ರ ಬಳಸಿಕೊಳ್ಳಬೇಕು. ಅಗತ್ಯಕ್ಕಿಂತ ಹೆಚ್ಚಿನ ಸಿಬ್ಭಂಧಿಯನ್ನು ನಿಯೋಜಿಸುವುದು ಸರಿಯಲ್ಲ. ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಮತ ಎಣಿಕೆ ದಿನದಂದು ಸಕಾಲದಲ್ಲಿ ಮತಎಣಿಕೆ ಕೇಂದ್ರದಲ್ಲಿ ತಮಗೆ ಸೂಚಿಸಿದ ಸ್ಥಳದಲ್ಲಿ ಹಾಜರಿದ್ದು ಅನವಶ್ಯಕ ಚರ್ಚೆಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲು ಸೂಚಿಸಿದರು.

ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತಿ ತಾಲೂಕುವಾರು ಪ್ರತ್ಯೇಕವಾಗಿ ಮತಎಣಿಕೆ ನಡೆಯಲಿದೆ. ಪ್ರತಿ ಸುತ್ತಿನ ಮತಎಣಿಕೆಯ ದಾಖಲೆಗಳನ್ನು ನಿರ್ವಹಿಸಿ, ಸಕ್ಷಮ ಅಧಿಕಾರಿಗಳಿಗೆ ನೀಡಿ ಸಹಿ ಪಡೆದುಕೊಳ್ಳಬೇಕು. ಅದರ ಸಂಪೂರ್ಣ ಜವಾಬ್ದಾರಿಯನ್ನು ಆಯಾ ತಾಲೂಕುಗಳ ತಹಶೀಲ್ದಾರರೆ ನೋಡಿಕೊಳ್ಳಬೇಕು. ಈ ಎಲ್ಲಾ ಚುನಾವಣಾ ಕಾರ್ಯದ ಉಸ್ತುವಾರಿ ಹಾಗೂ ಅಗತ್ಯತೆಗಳನ್ನು ಚುನಾವಣಾ ವೀಕ್ಷಕರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಗಮನಿಸಲಿದ್ದಾರೆ ಎಂದರು.

Advertisement

 

ಚುನಾವಣಾ ಕಾರ್ಯದ ವ್ಯವಸ್ಥಿತ ನಿರ್ವಹಣೆಗೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ಅಗತ್ಯ ತರಬೇತಿಯನ್ನು ನೀಡಲು ಈಗಾಗಲೇ ದಿನಾಂಕವನ್ನು ನಿಗಧಿಪಡಿಸಲಾಗಿದೆ. ಮತಎಣಿಕೆ ಕಾರ್ಯವು ಯಾವುದೇ ಅಡತಡೆಗಳಿಲ್ಲದೆ ಸುಗಮವಾಗಿ ನಡೆಸಲು ಹಾಗೂ ಈ ಎಲ್ಲಾ ವಿದ್ಯಾಮಾನಗಳನ್ನು ಸಕಾಲದಲ್ಲಿ ಜನರಿಗೆ ತಲುಪಿಸುವುದರ ಜೊತೆಗೆ ವ್ಯವಸ್ಥಿತವಾಗಿ ದಾಖಲೆಗಳನ್ನು ನಿರ್ವಹಿಸಲು ಗಣಕಯಂತ್ರ, ಮುದ್ರಣಯಂತ್ರ, ಝೆರಾಕ್ಸ್, ಇಂಟರ್‍ನೆಟ್ ಸಂಪರ್ಕ ಮತ್ತಿತರ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜವಾಬ್ದಾರಿಯುತ ಅಧಿಕಾರಿಗಳಿಗೆ ಹೊಣೆಗಾರಿಕೆ ವಹಿಸಲಾಗಿದೆ ಎಂದರು.

ಮತಎಣಿಕೆ ಕಾರ್ಯವನ್ನು ಸಕಾಲದಲ್ಲಿ ಆರಂಭಿಸಿ, ತ್ವರಿತವಾಗಿ ಫಲಿತಾಂಶ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು, ಈ ಅವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡಲು ಅಗತ್ಯ ರಕ್ಷಣಾ ಸಿಬ್ಬಂಧಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದವರು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತೀಕ್ ಸೇರಿದಂತೆ ಶಿರಾ ಮತ್ತು ಪಾವಗಡ ಸೇರಿದಂತೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
bengalurucareful countingcarry out responsiblechitradurgainstructionsuddionesuddione newsT. venkateshಚಿತ್ರದುರ್ಗಬೆಂಗಳೂರುಸುದ್ದಿಒನ್ಸುದ್ದಿಒನ್ ನ್ಯೂಸ್
Advertisement
Next Article