Homeಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಸಿನಿ ಸುದ್ದಿಕ್ರೀಡಾ ಸುದ್ದಿಆರೋಗ್ಯರಾಜ್ಯ ಸುದ್ದಿ

ಮಠದ ಸ್ವಾಮೀಜಿಗಳಾಗುವುದು ಕಷ್ಟವೇನಲ್ಲ, ಆದರೆ ಒಂದು ಮನೆಯ ಸೊಸೆಯಾಗುವುದು ತುಂಬಾ ಕಷ್ಟ : ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು

06:56 PM Feb 28, 2024 IST | suddionenews
Advertisement

 

Advertisement

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.28  : ಮಠದ ಸ್ವಾಮೀಜಿಗಳಾಗುವುದು ಕಷ್ಟವೇನಲ್ಲ. ಒಂದು ಮನೆಯ ಸೊಸೆಯಾಗುವುದು ತುಂಬಾ ಕಷ್ಟ. ಗಂಡನ ಮನೆಯಲ್ಲಿ ಎಲ್ಲಿರಿಗೂ ಹೊಂದಿಕೊಂಡು ಬಾಳುವುದು ಇನ್ನು ಕಠಿಣ ಎಂದು ಸಿರಿಗೆರೆಯ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

Advertisement

ಕಳೆದ 2 ರಂದು ನಿಧನರಾದ ಸಿರಿಗೆರೆ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ರಾ.ವೆಂಕಟೇಶಶೆಟ್ಟಿರವರ ಪತ್ನಿ ಶ್ರೀಮತಿ ಸುಕನ್ಯಾರವರ ಆತ್ಮಶಾಂತಿಗಾಗಿ ವಾಸವಿ ಮಹಲ್ ರಸ್ತೆಯಲ್ಲಿರುವ ಕನ್ಯಕಾ ಮಹಲ್‍ನಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವೈಕುಂಠ ಸಮಾರಾಧನೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ತಂದೆ-ತಾಯಿಯನ್ನು ಬಿಟ್ಟು ಹೆಣ್ಣು ಗಂಡನ ಮನೆಯ ವಾತಾವರಣಕ್ಕೆ ಹೊಂದಿಕೊಳ್ಳುವುದು ಸುಲಭವಲ್ಲ. ಮನುಷ್ಯನ ಜೀವನದಲ್ಲಿ ಜನನ-ಮರಣ ಸಾಮಾನ್ಯ. ಹೃದಯದ ಭಾವನೆಗಳನ್ನು ದುಡ್ಡಿನಲ್ಲಿ ಅಳೆಯಬಾರದು. ಆರ್ಯವೈಶ್ಯ ಸಮಾಜದವರು ಯಾರಾದರೂ ಮೃತಪಟ್ಟಾಗ ಅಂತ್ಯಕ್ರಿಯೇಯಾಗುವತನಕ ಎಲ್ಲವನ್ನು ನಿಭಾಯಿಸಿ ಮಾನವೀಯತೆ ಮೆರೆಯುತ್ತಾರೆ. ಸಮುದ್ರದ ಅಡಿಯಲ್ಲಿ ಕಪ್ಪೆಚಿಪ್ಪು, ಮುತ್ತುರತ್ನಗಳು ಸಿಗುತ್ತವೆ. ಅಕ್ಕಮಹಾದೇವಿ, ವಾಸವಿ ಜೀವನದಲ್ಲಿ ಒಂದು ತರನಾದ ಕಷ್ಟಗಳು ಎದುರಾಗುತ್ತವೆ. ಇವರಿಬ್ಬರ ಜೀವನದಲ್ಲಿಯೂ ಆಧ್ಯಾತ್ಮಿಕ ಸೆಳೆತವಿತ್ತು. ಆರ್ಯವೈಶ್ಯ ಸಮಾಜದವರಿಗೆ ಮತ್ತೊಬ್ಬರ ಕಷ್ಟಕ್ಕೆ ಮರುಗುವ ಗುಣವಿದೆ ಎಂದು ಶ್ಲಾಘಿಸಿದರು.

ಆರ್ಯವೈಶ್ಯ ಸಮಾಜಕ್ಕೂ ನಮ್ಮ ಮಠಕ್ಕೂ ಒಡನಾಟವಿದೆ. ಭಗವದ್ಗೀತೆಯನ್ನು ಸರಿಯಾಗಿ ಓದಿ ಅರ್ಥೈಸಿಕೊಳ್ಳದ ಮೂರ್ಖರು. ನಾನಾ ರೀತಿಯ ವ್ಯಾಖ್ಯಾನಗಳನ್ನು ಮಾಡುತ್ತಾರೆಂದರು.

ಯಾವುದೇ ಕೆಲಸವನ್ನು ಮಾಡುವಾಗ ಫಲಾಪೇಕ್ಷೆಯನ್ನು ಬಯಸಬಾರದು. ರಾ.ವೆಂಕಟೇಶಶೆಟ್ಟಿಯವರು ತಮ್ಮ ಪತ್ನಿಯ ಸೇವೆಯನ್ನು ಪ್ರೀತಿಯಿಂದ ಮಾಡಿದ್ದಾರೆ. ಕರ್ತವ್ಯವೆಂದುಕೊಳ್ಳಲಿಲ್ಲ. ಎಲ್ಲರ ಜೀವನದಲ್ಲಿ ಬಾಲ್ಯ, ಯವೌನ, ಮುಪ್ಪು ಇದ್ದೆ ಇರುತ್ತದೆ. ಆತ್ಮಕ್ಕೂ ಶರೀರಕ್ಕೂ ಸಂಬಂಧವಿದೆ. ಮನುಷ್ಯನ ಜೀವನಕ್ಕೂ ಮರಗಿಡಗಳಿಗೂ ವ್ಯತ್ಯಾಸವಿದೆ. ಶ್ರೀಮತಿ ಸುಕನ್ಯಾ ವೆಂಕಟೇಶ್‍ರವರು ದೈಹಿಕವಾಗಿ ಅಗಲಿರಬಹುದು. ಆದರೆ ಮಾನಸಿಕವಾಗಿ ಅವರ ಪತಿ ಮತ್ತು ಕುಟುಂಬದವರ ಮನದಲ್ಲಿದ್ದಾರೆಂದು ಹೇಳಿದರು.

ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ಮಾತನಾಡಿ ಸನ್ಯಾಸ ಜೀವನಕ್ಕಿಂತ ದಾಂಪತ್ಯ ಜೀವನ ದೊಡ್ಡದು ಎಂದು ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಹೇಳಿದ್ದಾರೆ. ಗಂಡನ ಆಗು-ಹೋಗುಗಳಿಗೆ ಹೆಂಡತಿ ಆಶ್ರಯ ಮುಖ್ಯ. 48 ವರ್ಷಗಳ ಕಾಲ ಸುಕನ್ಯಾರವರು ತಮ್ಮ ಪತಿ ರಾ.ವೆಂಕಟೇಶಶೆಟ್ಟಿರವರ ಜೊತೆ ಸಂಸಾರ ನಡೆಸಿದ್ದಾರೆ.
ಭಗವಂತ ಅವರಿಗೆ ದುಃಖ ನುಂಗಿಕೊಳ್ಳುವ ಧೈರ್ಯ, ಸ್ಥೈರ್ಯ ಕೊಡಲಿ ಎಂದು ಪ್ರಾರ್ಥಿಸಿದರು.

ರಾ.ವೆಂಕಟೇಶಶೆಟ್ಟಿ ಮಾತನಾಡಿ ನನ್ನ ಪತ್ನಿ ಸುಕನ್ಯಾ 48 ವರ್ಷಗಳ ಕಾಲ ನನ್ನ ಜೊತೆ ಸಂಸಾರ ನಡೆಸಿ ಈಗ ಅಗಲಿರುವ ನೋವು ಸಹಿಸಿಕೊಳ್ಳಲು ಆಗುತ್ತಿಲ್ಲ. ಮರಕ್ಕೆ ಬೇರಿನಂತಿದ್ದರು. ಗಂಡ-ಹೆಂಡತಿ ನಡುವೆ ಪರಸ್ಪರ ಪ್ರೀತಿಯಿರುತ್ತದೆ. ಅನಾರೋಗ್ಯಕ್ಕೆ ತುತ್ತಾದಾಗ ಸ್ವಲ್ಪವೂ ಬೇಸರಪಟ್ಟುಕೊಳ್ಳದೆ ಪ್ರೀತಿಯಿಂದ ನನ್ನ ಹೆಂಡತಿಯ ಸೇವೆ ಮಾಡಿದ್ದೇನೆ. ಕರ್ತವ್ಯ ಅಂದುಕೊಳ್ಳಲಿಲ್ಲ. ಈಗಲೂ ನನ್ನ ಜೊತೆಯಲ್ಲಿಯೇ ಇದ್ದಾರೆಂದುಕೊಂಡಿದ್ದೇನೆ. ನನಗೂ ಮತ್ತು ನನ್ನ ಕುಟುಂಬಕ್ಕೂ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಅನುಗ್ರಹವಿದೆ ಎಲ್ಲರನ್ನು ಕೈಹಿಡಿದು ಮೇಲಕ್ಕೆತ್ತಿದ್ದಾರೆ. ಈಗ ನನ್ನ ಕುಟುಂಬದ ಎಲ್ಲರೂ ಸುಖವಾಗಿದ್ದಾರೆಂದು ಭಾವುಕರಾದರು.

ಕಾಶಿವಿಶ್ವನಾಥಶೆಟ್ಟಿ, ಟಿ.ವಿ.ಸುರೇಶ್‍ಗುಪ್ತ ಇನ್ನು ಅನೇಕರು ಮಾತನಾಡಿದರು. ರಾ.ವೆಂಕಟೇಶಶೆಟ್ಟಿರವರ ಕುಟುಂಬದವರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳು ವೈಕುಂಠ ಸಮಾರಾಧನೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
bengaluruchitradurgadaughter-in-lawdifficultmathsuddionesuddione newsSwamijiTaralbalu Dr. Shivamurthy Shivacharya Mahaswamyvery difficultಚಿತ್ರದುರ್ಗತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳುತುಂಬಾ ಕಷ್ಟಬೆಂಗಳೂರುಮಠಸುದ್ದಿಒನ್ಸುದ್ದಿಒನ್ ನ್ಯೂಸ್ಸೊಸೆಸ್ವಾಮೀಜಿ
Advertisement
Next Article